ಎಸ್.ಎಂ.ಕೃಷ್ಣ 
ರಾಜಕೀಯ

ಅಧಿಕಾರದಲ್ಲಿರುವ ನಾಯಕತ್ವವನ್ನು ಟೀಕಿಸುವಲ್ಲಿನ ಭಯವನ್ನು ಬಿಡಬೇಕು: ಎಸ್.ಎಂ.ಕೃಷ್ಣ

ದೇಶದಲ್ಲಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವದ ಕೊರತೆ ಕಾಡುತ್ತಿದ್ದು, ಅಧಿಕಾರದಲ್ಲಿರುವ ನಾಯಕತ್ವವನ್ನು ಟೀಕಿಸುವಲ್ಲಿನ ಭಯವನ್ನು ಬಿಡಬೇಕು ಎಂದು ಹಿರಿಯ ರಾಜಕಾರಣಿ ಮತ್ತು ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಹೇಳಿದ್ದಾರೆ.

ಬೆಂಗಳೂರು: ದೇಶದಲ್ಲಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವದ ಕೊರತೆ ಕಾಡುತ್ತಿದ್ದು, ಅಧಿಕಾರದಲ್ಲಿರುವ ನಾಯಕತ್ವವನ್ನು ಟೀಕಿಸುವಲ್ಲಿನ ಭಯವನ್ನು ಬಿಡಬೇಕು ಎಂದು ಹಿರಿಯ ರಾಜಕಾರಣಿ ಮತ್ತು ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಹೇಳಿದ್ದಾರೆ.

ಬಿಜೆಪಿ ಕಾರ್ಯನಿರ್ವಹಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೊಗಳಿದ್ದಾರೆ.ಆದರೆ, ಕಾಂಗ್ರೆಸ್ ಇನ್ನೂ ಪ್ರಬಲ ಶಕ್ತಿಯಾಗಿದೆ. ಪ್ರಾದೇಶಿಕ ಪಕ್ಷಗಳೊಂದಿಗೆ ಮರು ಸಂಘಟನೆ ಜಿಪಿ ನಡ್ಡಾ ನೇತೃತ್ವದ ಪಕ್ಷಕ್ಕೆ ಪ್ರಮುಖ ಸವಾಲಾಗಿದೆ ಎಂದಿದ್ದಾರೆ.

ಆದಾಗ್ಯೂ, 45 ವರ್ಷಗಳ ಕಾಂಗ್ರೆಸ್ ಜೊತೆಗಿನ ಒಡನಾಟ ತ್ಯಜಿಸಿ ಮೂರು ವರ್ಷಗಳ ಹಿಂದೆ ಸೇರ್ಪಡೆಯಾದ ಬಿಜೆಪಿ 2024ರ ಲೋಕಸಭಾ ಚುನಾವಣೆಯಲ್ಲೂ ಮತ್ತೆ ಅಧಿಕಾರಕ್ಕೆ ಬರಲಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಎಸ್ ಎಂಕೃಷ್ಣಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಂದು ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವದ ಕೊರತೆ ಎದುರಿಸುತ್ತಿದ್ದು, ಇಂತಹ ವ್ಯವಸ್ಥೆಯ ಬಗ್ಗೆ ಪರಾಮರ್ಶಿಸಬೇಕಾದ ಅಗತ್ಯವಿದೆ. ಅಧಿಕಾರದಲ್ಲಿರುವ ನಾಯಕತ್ವವನ್ನು ಟೀಕಿಸುವ ಭಯವನ್ನು ಬಿಡಬೇಕು ಎಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಹಾರಾಷ್ಟ್ರದ ಮಾಜಿ ರಾಜ್ಯಪಾಲರು ಹೇಳಿದರು.

ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ರಾಜಸ್ಥಾನದಲ್ಲಿನ ಸಚಿನ್ ಪೈಲಟ್ ಅವರ ಬಂಡಾಯ ಕುರಿತಂತೆ ಪ್ರತಿಕ್ರಿಯಿಸಿದ ಎಸ್ ಎಂ ಕೃಷ್ಣ, ಅದು ಕಾಂಗ್ರೆಸ್ ಪಕ್ಷದಲ್ಲಿನ  ಅಳವಾದ ಅಸ್ವಸ್ಥತೆಯ ಭಾಗವಾಗಿದೆ. ಯುವ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಬೇಕು,ಹಳಬರು ಯುವ ನಾಯಕರಿಗೆ ಅವಕಾಶ  ಮಾಡಿಕೊಡಬೇಕು, ಅಗತ್ಯ ಮಾರ್ಗದರ್ಶನ ನೀಡಬೇಕು ಎಂದರು.

ಪಕ್ಷ ವಿಕಸನಗೊಳ್ಳಲಿದ್ದರೆ ಪಕ್ಷದ ಅಧ:ಪತನ ಆರಂಭಗೊಳ್ಳುತ್ತದೆ. ಹಿಂದಿನ ಘಟನೆಗಳಿಂದ ಪಾಠ ಕಲಿಯಲು ಪಕ್ಷ ಹಿಂದಿನ ಕಡೆ ನೋಡಬೇಕು ಎಂದು ಹೇಳಿದ ಅವರು,ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದಾಗಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದು,ಅಭಿವೃದ್ಧಿ ಕಾರ್ಯಗಳಲ್ಲಿ ನಾವೆಲ್ಲರೂ ಜೊತೆಯಾಗಿರುವುದಕ್ಕೆ ಹೆಮ್ಮೆಯಾಗುತ್ತಿದೆ ಎಂದು ಹೇಳಿದ ಎಸ್.ಎಂ. ಕೃಷ್ಣ, ಅಧಿಕಾರದಲ್ಲಿರುವಾಗ ಪ್ರಾದೇಶಿಕ ಪಕ್ಷಗಳನ್ನು ಪಕ್ಕಕ್ಕೆ ತಳ್ಳಬಾರದು ಎಂಬ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT