ಕಟೀಲ್-ಸಿದ್ದರಾಮಯ್ಯ 
ರಾಜಕೀಯ

ನಾನು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರವಲ್ಲ: ಕಟೀಲ್‌ಗೆ ಸಿದ್ದರಾಮಯ್ಯ ತಿರುಗೇಟು

ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗುರುವಾರ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಗುರುವಾರ ತಿರುಗೇಟು ನೀಡಿದ್ದಾರೆ.

ದಲಿತರ ಪರವೋ?, ಹಿಂದೂಗಳ ಪರವೋ? ಎಂಬ ನಳಿನ್ ಕುಮಾರ್ ಅವರ ಪ್ರಶ್ನೆಗೆ ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು(ಬಿಜೆಪಿ) ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ ತೀಕ್ಷ್ಣವಾಗಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ ದಲಿತರ ಪರವೋ? ಹಿಂದೂಗಳ ಪರವೋ? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ಸಿದ್ದರಾಮಯ್ಯ ಅವರು ಹಿರಿಯರಿಂದ ತಿಳಿದು ಸ್ಪಷ್ಟಪಡಿಸಲಿ ಎಂದು ಟ್ವೀಟ್ ಮೂಲಕ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದರು.

ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮನೆಗೆ ವಾಪಸ್ಸಾಗಿದ್ದೇನೆ. ಕಳೆದ 10 ದಿನಗಳಲ್ಲಿ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ಸಿದ್ದರಾಮಯ್ಯ ಧನ್ಯವಾದ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT