ಸಿದ್ದರಾಮಯ್ಯ 
ರಾಜಕೀಯ

ಬೆಂಗಳೂರು ಗಲಭೆ ಪ್ರಕರಣದ ತನಿಖೆಯ ಹಾದಿತಪ್ಪಿಸುತ್ತಿದೆ ಬಿಜೆಪಿ: ಸಿದ್ದರಾಮಯ್ಯ

ಒಬ್ಬೊಬ್ಬ ಬಿಜೆಪಿ ಶಾಸಕರು ಭಿನ್ನ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಮೂಲಕ ಬೆಂಗಳೂರು ಗಲಭೆ ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. 

ಬೆಂಗಳೂರು: ಒಬ್ಬೊಬ್ಬ ಬಿಜೆಪಿ ಶಾಸಕರು ಭಿನ್ನ ರೀತಿಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಮೂಲಕ ಬೆಂಗಳೂರು ಗಲಭೆ ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಗಲಭೆ ಪ್ರಕರಣ ಸಂಬಂಧ ಆರಂಭದಲ್ಲಿ ಎಸ್'ಡಿಪಿಐ ವಿರುದ್ಧ ಆರೋಪ ಮಾಡಿದ್ದರು. ಬಳಿಕ ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ್ದರು. ಇದೀಗ ಉಗ್ರ ಸಂಘಟನೆಯ ನಂಟು ಕಲ್ಪಿಸುತ್ತಿದ್ದಾರೆ. ಈ ಮೂಲಕ ಏನನ್ನು ಮುಚ್ಚಿಡಲು ಯತ್ನಿಸುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. 

ತಪ್ಪಿತಸ್ಥರನ್ನು ಕಂಡು ಹಿಡಿಯುವ ಬದಲು ಬಿಜೆಪಿ ನಾಯಕರು ಕಾಂಗ್ರೆಸ್ ನ್ನು ಗುರಿ ಮಾಡಲು ಯತ್ನಿಸುತ್ತಿದ್ದಾರೆ. ಯಾವುದೇ ಸಂಕಷ್ಟ ಎದುರಾದರೂ ಎಲ್ಲದರಲ್ಲೂ ರಾಜಕೀಯವನ್ನು ನೋಡುತ್ತಾರೆ. ಬಿಜೆಪಿಯನ್ನು ಸ್ಪಷ್ಟವಾಗಿ ಎರಡು ಬಣಗಳಾಗಿ ವಿಂಗಡಿಸಲಾಗಿದೆ. ಬಿಎಸ್ ಯಡಿಯೂರಪ್ಪ ಸರ್ಕಾರ ಉರುಳಿಸಲು ಕಾವಲ್ ಬೈರಸಂದ್ರ ಘಟನೆಯ ಲಾಭ ಪಡೆಯಲು ಆರ್‌ಎಸ್‌ಎಸ್‌ಗೆ ಹತ್ತಿರವಾದವರು ಯತ್ನ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು, 

ಈ ಘಟನೆ ಬಿಜೆಪಿಯ ಪ್ರಕಾರ ಪೂರ್ವ ಯೋಜಿತವಾಗಿದ್ದರೆ, ಇದು ಗುಪ್ತಚರ ಇಲಾಖೆಯ ಗಮನಕ್ಕೇಕೆ ಬರಲಿಲ್ಲ? ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT