ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಗಲಭೆಯಲ್ಲಿ ಆರ್‌ಎಸ್‌ಎಸ್ ಪಾತ್ರ ಸಾಬೀತು ಪಡಿಸಿ, ಇಲ್ಲವೇ ಬೇಷರತ್ ಕ್ಷಮೆ ಕೇಳಿ: ನಳಿನ್ ಕಟೀಲ್ ಒತ್ತಾಯ

ಕೋಮು ಗಲಭೆಯಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಸಹ ಸಂಘಟನೆಗಳ ಪಾತ್ರವನ್ನು ಸಾಬೀತು ಪಡಿಸಿ ಇಲ್ಲವೇ ಬೇಷರತ್ ಕ್ಷಮೆ ಕೇಳಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಬೆಂಗಳೂರು: ಕೋಮು ಗಲಭೆಯಲ್ಲಿ ಆರ್‌ಎಸ್‌ಎಸ್ ಮತ್ತು ಅದರ ಸಹ ಸಂಘಟನೆಗಳ ಪಾತ್ರವನ್ನು ಸಾಬೀತು ಪಡಿಸಿ ಇಲ್ಲವೇ ಬೇಷರತ್ ಕ್ಷಮೆ ಕೇಳಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಆರ್‌ಎಸ್‌ಎಸ್ ಮತ್ತು ಅದರ ಸಹ  ಸಂಘಟನೆಗಳೇ ಕೋಮು ಗಲಭೆಯ ಸಂದರ್ಭದಲ್ಲಿ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಮಾಡಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಅತಿರೇಕದಿಂದ ಕೂಡಿದೆ. ಯಾವುದೇ ತನಿಖಾ ಸಂಸ್ಥೆ ಅಥವಾ ವಿಚಾರಣಾ ನ್ಯಾಯಾಲಯಗಳು ದೇಶದ ಯಾವುದೇ ಭಾಗದಲ್ಲಿ ನಡೆದ ಕೋಮು ಗಲಭೆಗಳಲ್ಲಿ ಯಾವತ್ತೂ ಆರ್‌ಎಸ್‌ಎಸ್‌ ಅಥವಾ ಅದರ ಸಹ ಸಂಘಟನೆಗಳು ಕಾರಣ ಎಂದು ಹೇಳಿಲ್ಲ, ಆದರೆ ಸಿದ್ದರಾಮಯ್ಯ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ಕಟೀಲ್ ಟೀಕಿಸಿದ್ದಾರೆ.

ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯಿಂದ ಆದ ಹಾನಿಯನ್ನು ಗಲಭೆಕೋರರಿಂದಲೇ ವಸೂಲಿ ಮಾಡುವ ಸರ್ಕಾರದ ಕ್ರಮಕ್ಕೆ ಪ್ರತಿಯಾಗಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಕೆಲವು ದಿನಗಳ ಹಿಂದೆ ಬರೆದಿರುವ ತಮ್ಮ 13 ಅಂಶಗಳನ್ನು ಒಳಗೊಂಡ ಎರಡು ಪುಟಗಳ ಪತ್ರದಲ್ಲಿ ಸಂಘ ಪರಿವಾರ ಈ ಹಿಂದೆ ನಡೆದಿರುವ ಕೋಮು ಗಲಭೆಗಳಲ್ಲಿ ಆದ ಹಾನಿಯನ್ನು ತುಂಬಿಕೊಡುವಂತೆ ಮಾಡಬೇಕು ಎಂದು ಉಲ್ಲೇಖಿಸಿರುವುದನ್ನು ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!