ಎಚ್.ವಿಶ್ವನಾಥ್ 
ರಾಜಕೀಯ

ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ: ಎಚ್.ವಿಶ್ವನಾಥ್

ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅವರು ಹೇಳಿದ್ದಾರೆ.

ಬೆಂಗಳೂರು: ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ ವ್ಯಕ್ತಿಯಲ್ಲ. ಆತನ ಕುರಿತು ವಿದ್ಯಾರ್ಥಿಗಳು ಓದಿ ತಿಳಿದುಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್‌. ಅದೇ ಸಾಲಿಗೆ ಟಿಪ್ಪು ಕೂಡ ಸೇರುತ್ತಾನೆ ಎಂದು ಅವರು ಹೇಳಿದರು.

ಗಾಂಧೀಜಿಯಿಂದ ಟಿಪ್ಪು ಸುಲ್ತಾನ್‌ ವರೆಗೆ ನಮ್ಮ ವಿದ್ಯಾರ್ಥಿಗಳು ಓದಬೇಕು. ಸರಕಾರ ಟಿಪ್ಪು ಪಠ್ಯವನ್ನು ಕೈಬಿಟ್ಟಿಲ್ಲ. 5ನೇ ತರಗತಿ ಬದಲಿಗೆ 7ನೇ ತರಗತಿಯಲ್ಲಿ ಸೇರಿಸಿದೆ ಎಂದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಆಗಲೇ ಬೇಕು. ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಹೋರಾ ಡಿದ ಅಪ್ರತಿಮ ವೀರ. ಅವರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಅವರ ಪ್ರತಿಮೆ ಸ್ಥಾಪಿಸುವುದು ಸರಕಾರದ ಕರ್ತವ್ಯ ಎಂದರು.

ನನ್ನನ್ನು  ಮಾಡಿ ಎಂದು ಕೇಳ್ಳೋದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಬದಲು ನಾನು ಕಾರಣನಾಗಿದ್ದು, ಅದನ್ನು ತಿಳಿದು ಪಕ್ಷದ ನಾಯಕರೇ ನನ್ನನ್ನು ಮಂತ್ರಿ ಮಾಡಬೇಕು ಎಂದರು. ಮಂತ್ರಿಯಾದರೆ ಏನೋ ಮಾಡಿ ಬಿಡುತ್ತೇನೆ ಎಂದಲ್ಲ. ನಾನು 1978 ರಿಂದಲೇ ರಾಜಕೀಯ ದಲ್ಲಿರುವವ. ಮಲ್ಲಿಕಾರ್ಜುನ ಖರ್ಗೆ ಅವರು 72ರಿಂದಲೇ ರಾಜಕೀಯದಲ್ಲಿದ್ದಾರೆ. ನಮ್ಮಂಥವರ ಅನುಭವ ಪಡೆಯಿರಿ ಎಂದು ಹೇಳುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT