ಎಂಪಿ ಕುಮಾರಸ್ವಾಮಿ 
ರಾಜಕೀಯ

ನಿಗಮ-ಮಂಡಳಿ ಹುದ್ದೆ ನನಗೆ ಬೇಡವೇ ಬೇಡ: ಸಿಎಂಗೆ ಎಂಪಿ ಕುಮಾರಸ್ವಾಮಿ ಪತ್ರ

ಕೆಲ ದಿನಗಳ ಹಿಂದೆ ಎಂಸಿಎ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮೂಡಿಗೆರೆ ಶಾಸಕರ ಎಂ.ಪಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು.

ಚಿಕ್ಕಮಗಳೂರು: ಕೆಲ ದಿನಗಳ ಹಿಂದೆ ಎಂಸಿಎ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮೂಡಿಗೆರೆ ಶಾಸಕರ ಎಂ.ಪಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು.  ಆ ವೇಳೆಯೇ ಕುಮಾರಸ್ವಾಮಿ ನಿಗಮ ಮಂಡಳಿ ನೀಡಿದ  ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ಎಂ.ಸಿ.ಎ (ಮಾರ್ಕೆಟಿಂಗ್ ಕನ್ಸಲ್ಟಂಟ್ಸ್ ಅಥಾರಿಟಿ) ನಿಗಮ ಮಂಡಳಿ ಅಧ್ಯಕ್ಷಸ್ಥಾನ ನನಗೆ
ಬೇಡ ಎಂದು ಸಿಎಂಗೆ ಪತ್ರ ಬರೆಯುವ  ಮೂಲಕ ಅಧ್ಯಕ್ಷ ಸ್ಥಾನವನ್ನ ನಿರಾಕರಿಸಿದ್ದಾರೆ. 

ಈ ಸಂಬಂಧ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸುವುದಿಲ್ಲ ಎಂದು ವಿನಮ್ರವಾಗಿ ಅಧ್ಯಕ್ಷ ಸ್ಥಾನವನ್ನು ತಿರಸ್ಕರಿಸಿದ್ದಾರೆ.

ನೀವು ನನ್ನ ರಾಜಕೀಯ ಜೀವನದಲ್ಲಿ 1999 ರಿಂದ ಪ್ರೋತ್ಸಾಹ ನೀಡಿದ್ದೀರಿ. ಒಮ್ಮೆ ಜಿಲ್ಲಾ ಪಂಚಾಯತ್ ಸದಸ್ಯನಾಗಿ, ಮೂರು ಬಾರಿ ಶಾಸಕರಾಗಿ ಮಾಡಿದ್ದೀರಿ. ಈ ಹಿನ್ನೆಲೆಯಲ್ಲಿ ನನ್ನ ಮೇಲಿನ ಪ್ರೀತಿಯಿಂದಲೇ ಎಂಸಿಎ ಅಧ್ಯಕ್ಷ  ಸ್ಥಾನ ನೀಡಿದ್ದು, ನಿಮಗೆ ನಾನು ಯಾವತ್ತು ಚಿರ ಋಣಿಯಾಗಿದ್ದೇನೆ. ಈವರೆಗೆ ನಾನು ನಿಮ್ಮನ್ನ ಮಂತ್ರಿ ಅಥವಾ ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ಮಾಡಿ ಎಂದು ಯಾವತ್ತು ಕೇಳಿಲ್ಲ. ಆದರೆ ತಾವು ನನಗೆ ನೀಡಿರುವ ಎಂಸಿಎ ಅಧ್ಯಕ್ಷ ಹುದ್ದೆ ಅಲಂಕರಿಸುವುದಿಲ್ಲ. ಅನ್ಯತಾ ಭಾವಿಸಬೇಡಿ ಎಂದು
ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಎಸ್​​ಸಿ ಬಲಗೈ ಸಮುದಾಯದ ಜನಾಂಗವು ಹೆಚ್ಚಿದ್ದು, ಇನ್ನು ಸಾಕಷ್ಟು ಹಿಂದುಳಿದಿದ್ದಾರೆ. ಈ ಸಮುದಾಯದಿಂದ ಮೂವರು ಶಾಸಕರು ಆಯ್ಕೆಯಾಗಿದ್ದು ಮುಂದಿನ ದಿನಗಳಲ್ಲಿ ಯಾರನ್ನಾದರು ಮಂತ್ರಿಗಳನ್ನಾಗಿ ಮಾಡಿ. 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಎಸ್.ಸಿ ಬಲಗೈ ಸಮುದಾಯದವರು ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಲು
ಪ್ರೋತ್ಸಾಹಿಸುವಂತೆ ಸಹಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT