ಸಿ.ಪಿ ಯೋಗೇಶ್ವರ್ 
ರಾಜಕೀಯ

ಕಪ್ಪು ಹಣ: ಸಿಪಿ ಯೋಗೇಶ್ವರ್, ಸಂತೋಷ್ ಬಂಧಿಸುವಂತೆ ಕಾಂಗ್ರೆಸ್ ಪ್ರತಿಭಟನೆ

ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ, ತನ್ನ ಪಕ್ದದ ನಾಯಕರಾದ ಸಿ ಪಿ ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಕಪ್ಪು ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ, ತನ್ನ ಪಕ್ದದ ನಾಯಕರಾದ ಸಿ ಪಿ ಯೋಗೇಶ್ವರ್, ಎನ್ ಆರ್ ಸಂತೋಷ್ ಹಾಗೂ ಎಚ್. ವಿಶ್ವನಾಥ್ ಅವರನ್ನು ಬಂಧಿಸಿ ತನಿಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಆನಂದ್ ರಾವ್ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ವಿಧನಾ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ವಿರುದ್ದ ಘೋಷಣೆ ಕೂಗಿದರು.

ಇಬ್ಬರೂ ಬಿಜೆಪಿ ಸರ್ಕಾರ ರಚನೆ ಮಾಡುವ ವೇಳೆ, ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣ ಬಳಸಿರುವುದು ಬಹಿರಂಗೊಂಡಿದೆ.

ಕೇಂದ್ರ ಸರ್ಕಾರ ಕಪ್ಪು ಹಣ ಹೊಂದಿರುವವರ ವಿರುದ್ಧ ಕ್ರಮ ಜರುಗಿಸುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಾರೆ. ಆದರೆ ತಮ್ಮ ಪಕ್ಷದ ನಾಯಕರ ವಿರುದ್ಧ ಮಾತ್ರ ದಿವ್ಯ ಮೌನ ವಹಿಸುತ್ತಾರೆ. ಬಿಜೆಪಿಯ ಎಚ್. ವಿಶ್ವನಾಥ್ ಇತ್ತೀಚೆಗೆ ಮಾತನಾಡಿದ ಸಂದರ್ಭದಲ್ಲಿ ತಮಗೆ ಸಿ.ಪಿ. ಯೋಗೇಶ್ವರ್ ಮತ್ತು ಎನ್.ಆರ್, ಸಂತೋಷ್ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರಿಂದ ತಲುಪಿಸಬೇಕಾಗಿದ್ದ ಹಣವನ್ನು ತಲುಪಿಸಿಲ್ಲ. ಈ ಇಬ್ಬರನ್ನು ತಕ್ಷಣ ಬಂಧಿಸಿ ಇವರುಗಳ ವಿರುದ್ಧ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT