ಯಡಿಯೂರಪ್ಪ 
ರಾಜಕೀಯ

ಯೋಗೇಶ್ವರ್, ಮುನಿರತ್ನ ಸೇರಿ ಐವರು ಶಾಸಕರಿಗೆ ಶೀಘ್ರವೇ ಮಂತ್ರಿ ಭಾಗ್ಯ!

ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ.

ಬೆಂಗಳೂರು: ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ.

ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ, 

ಆರ್ .ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನ , ಉಮೇಶ್ ಕತ್ತಿ ಮತ್ತು ಸಿಪಿ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳ ಮಾಹಿತಿ ತಿಳಿಸಿವೆ.

ಬಿಜೆಪಿ ಸರ್ಕಾರ ರಚನೆಯಾದಾಗಿನಿಂದಲೂ 8 ಬಾರಿ ಶಾಸಕರಾಗಿರುವ ಹುಕ್ಕೇರಿಯ ಉಮೇಶ್ ಕತ್ತಿ ನಿರಂತರವಾಗಿ ಲಾಬಿ ನಡೆಸುತ್ತಲೇ ಬಂದಿದ್ದಾರೆ,  ಹೀಗಾಗಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಖಚಿತ ಎಂದು ಹೇಳಲಾಗುತ್ತಿದೆ. ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿದರೇ ಬೆಳಗಾವಿ ಐವರು ಶಾಸಕರಿಗೆ ಸಚಿವ ಸ್ಥಾನ ದೊರಕಿದಂತಾಗುತ್ತದೆ.

ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂಕೆ 10 ಸದಸ್ಯರಸು ಭಾಗವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್. ಅಶೋಕ, ಈಶ್ವರಪ್ಪ, ಸಿಟಿ ರವಿ ಹಾಗೂ ಅರವಿಂದ ಲಿಂಬಾವಳಿ ಪಾಲ್ಗೊಂಡಿದ್ದರು. ಕೇಂದ್ರ ಸಚಿವ ಸದಾನಂದಗೌಡ ಮತ್ತು ಸಿಎಂ ಉದಾಸಿ ಸಭೆಗೆ ಗೈರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT