ಸಚಿವ ಸುಧಾಕರ್ 
ರಾಜಕೀಯ

ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ: ಡಾ. ಕೆ.ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಈ ಹಿಂದೇ ತಾವೇ ಬೆಂಬಲಿಸಿದ್ದ ಸುಧಾರಣೆಗಳನ್ನು ಈಗ ವಿನಾಕಾರಣ ವಿರೋಧಿಸುತ್ತಿರುವ ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಡಿಎಂಕೆ ಪ್ರಣಾಳಿಕೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಆಮ್ರಿಂದರ್ ಸಿಂಗ್ ಅವರ ಹೇಳಿಕೆಗಳೂ ಈ ಹಿಂದೆ ಈ ಸುಧಾರಣೆಗಳನ್ನು ಬೆಂಬಲಿಸಿದ್ದವು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ ನವೆಂಬರ್ 23ರಂದು ಕೇಂದ್ರದ ಮಸೂದೆಗಳು ಜಾರಿಗೆ ಬರುವಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತೃತ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರೆಯಲಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT