ಸಚಿವ ಸುಧಾಕರ್ 
ರಾಜಕೀಯ

ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ: ಡಾ. ಕೆ.ಸುಧಾಕರ್

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಈ ಹಿಂದೇ ತಾವೇ ಬೆಂಬಲಿಸಿದ್ದ ಸುಧಾರಣೆಗಳನ್ನು ಈಗ ವಿನಾಕಾರಣ ವಿರೋಧಿಸುತ್ತಿರುವ ವಿಪಕ್ಷಗಳ ನಡೆ ರಾಜಕೀಯ ದುರುದ್ದೇಶದಿಂದ ಕೂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ಕಟಿಬದ್ಧವಾಗಿದ್ದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರದ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಡಿಎಂಕೆ ಪ್ರಣಾಳಿಕೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಆಮ್ರಿಂದರ್ ಸಿಂಗ್ ಅವರ ಹೇಳಿಕೆಗಳೂ ಈ ಹಿಂದೆ ಈ ಸುಧಾರಣೆಗಳನ್ನು ಬೆಂಬಲಿಸಿದ್ದವು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಈಗಾಗಲೇ ನವೆಂಬರ್ 23ರಂದು ಕೇಂದ್ರದ ಮಸೂದೆಗಳು ಜಾರಿಗೆ ಬರುವಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಇದೇ ರೀತಿಯ ಕೃಷಿ ಸುಧಾರಣೆಗಳನ್ನು ತರಲು ಮುಂದಾಗಿತ್ತು ಮತ್ತು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಇದೇ ಭರವಸೆ ನೀಡಲಾಗಿತ್ತು. ಅಂದಿನ ಕೇಂದ್ರ ಕೃಷಿ ಸಚಿವರಾಗಿದ್ದ ಶರದ್ ಪವಾರ್ ಅವರು ಈ ಸುಧಾರಣೆಗಳನ್ನು ತರಲು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಜನರ ವಿಶ್ವಾಸ ಕಳೆದುಕೊಂಡು ಚುನಾವಣೆಗಳಲ್ಲಿ ಸತತ ಸೋಲುಗಳಿಂದ ಹತಾಶಗೊಂಡಿರುವ ವಿಪಕ್ಷಗಳು ರೈತರನ್ನು ದಿಕ್ಕು ತಪ್ಪಿಸಲು ಯತ್ನಿಸುತ್ತಿವೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ವಿಸ್ತೃತ ಮಾರುಕಟ್ಟೆ ಕಲ್ಪಿಸಿ, ಅನ್ನದಾತರ ಆದಾಯ ಹೆಚ್ಚಿಸುವ ಸದುದ್ದೇಶ ಹೊಂದಿದ್ದು, ಈಗಿರುವ ಎಪಿಎಂಸಿ, ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಸಹ ಮುಂದುವರೆಯಲಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!