ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ: ಕಾಂಗ್ರೆಸ್‌ನ ದೌಲತ್ತು ಅದರ ದುಸ್ಥಿತಿಗೆ ಕಾರಣ'

ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಬೆಂಗಳೂರು: ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್ ನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್ ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

“ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್ನ ಬಿ ಟೀಂ.ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಪಕ್ಕದಲ್ಲಿ ಆವರಣ(ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾಗಷ್ಟೇ ಅದರ ಹೆಸರು ಪೂರ್ಣವಾಗುತ್ತದೆ. ಅಷ್ಟರ ಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ.

ಜಾತ್ಯತೀತ ನಿಲುವಿನ ಬಗ್ಗೆ! ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡಿದ ಕಾಂಗ್ರೆಸ್ ಇವತ್ತು ಜೆಡಿಎಸ್ ನ ನಿಲುವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT