ಸದನದಲ್ಲಿ ಮಾತನಾಡುತ್ತಿರುವ ಸಚಿವ ಮಾಧುಸ್ವಾಮಿ 
ರಾಜಕೀಯ

ನಾಲ್ಕೇ ದಿನಕ್ಕೆ ಅಧಿವೇಶನ ಅಂತ್ಯ: ಗುರುವಾರ ವಿಧಾನಸಭೆ ಕಲಾಪ ಮುಕ್ತಾಯಗೊಳಿಸಲು ತೀರ್ಮಾನ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಿನ್ನೆಯಿಂದ ಆರಂಭವಾಗಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಕಲಾಪದ ಮೊದಲ ದಿನವೇ ಸದನದಲ್ಲಿ ಖುರ್ಚಿಗಳು ಖಾಲಿ ಖಾಲಿಯಾಗಿದ್ದವು. ಹಲವು ಸಚಿವರು, ಆಡಳಿತ ಹಾಗೂ ವಿಪಕ್ಷಗಳ ಅನೇಕ ಸದಸ್ಯರು ಸದನಕ್ಕೆ ಗೈರು ಹಾಜರಾಗಿದ್ದರು.

ಡಿಸೆಂಬರ್ 15ರ ವರೆಗೆ ಅಧಿವೇಶನ ನಡೆಯಬೇಕಿತ್ತು. ಆದರೆ ಗ್ರಾಮ ಪಂಚಾಯ್ತಿ ಚುನಾವಣೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಕ್ತಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT