ರಾಜಕೀಯ

ನಾಲ್ಕೇ ದಿನಕ್ಕೆ ಅಧಿವೇಶನ ಅಂತ್ಯ: ಗುರುವಾರ ವಿಧಾನಸಭೆ ಕಲಾಪ ಮುಕ್ತಾಯಗೊಳಿಸಲು ತೀರ್ಮಾನ

Lingaraj Badiger

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ಇಂದು ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ನಿನ್ನೆಯಿಂದ ಆರಂಭವಾಗಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನಕ್ಕೆ ಕಲಾಪದ ಮೊದಲ ದಿನವೇ ಸದನದಲ್ಲಿ ಖುರ್ಚಿಗಳು ಖಾಲಿ ಖಾಲಿಯಾಗಿದ್ದವು. ಹಲವು ಸಚಿವರು, ಆಡಳಿತ ಹಾಗೂ ವಿಪಕ್ಷಗಳ ಅನೇಕ ಸದಸ್ಯರು ಸದನಕ್ಕೆ ಗೈರು ಹಾಜರಾಗಿದ್ದರು.

ಡಿಸೆಂಬರ್ 15ರ ವರೆಗೆ ಅಧಿವೇಶನ ನಡೆಯಬೇಕಿತ್ತು. ಆದರೆ ಗ್ರಾಮ ಪಂಚಾಯ್ತಿ ಚುನಾವಣೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಅಧಿವೇಶನವನ್ನು ನಾಲ್ಕೇ ದಿನಕ್ಕೆ ಮುಕ್ತಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

SCROLL FOR NEXT