ಸಿದ್ದರಾಮಯ್ಯ, ನರೇಂದ್ರ ಮೋದಿ 
ರಾಜಕೀಯ

ಮೋದಿ ಸರ್ಕಾರ ಬಂದ ಮೇಲೆ ದನದ ಮಾಂಸ ರಫ್ತು ಹೆಚ್ಚಳ: ಸಿದ್ದರಾಮಯ್ಯ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ಬಲವಾಗಿ ವಿರೋಧಿಸಿರುವ ವಿಧಾನಸಭೆ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ, ಮೋದಿ ಸರ್ಕಾರ ಬಂದ ಮೇಲೆ ದನದ ಮಾಂಸ ರಫ್ತು ಹೆಚ್ಚಳವಾಗಿದೆ ಎಂದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ಬಲವಾಗಿ ವಿರೋಧಿಸಿರುವ ವಿಧಾನಸಭೆ ವಿರೋಧ ಪಕ್ಷದ  ನಾಯಕ ಸಿದ್ದರಾಮಯ್ಯ, ಮೋದಿ ಸರ್ಕಾರ ಬಂದ ಮೇಲೆ ದನದ ಮಾಂಸ ರಫ್ತು ಹೆಚ್ಚಳವಾಗಿದೆ ಎಂದಿದ್ದಾರೆ.

ನಗರದಲ್ಲಿಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಕಮಿಟಿ ರಚಿಸಿ ತಜ್ಞರ ಸಮಿತಿಯೊಂದನ್ನು ರಚಿಸಲಿ, ಇದರ ಸಾಧಕ- ಭಾದಕಗಳ ಬಗ್ಗೆ ವ್ಯಾಪಕ ಚರ್ಚೆ ನಡೆದು ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಾವು ಸಹ ಗೋಮಾತೆಯನ್ನು ಪೂಜಿಸುತ್ತೇವೆ. ದೀಪಾವಳಿ ಹಬ್ಬದಂದೂ ನಾವು ಹಸುಗಳಿಗೆ ಎಡೆ ಹಾಕುತ್ತೇವೆ. ಒಂದು ಹಸುಗೆ ದಿನಕ್ಕೆ ಕನಿಷ್ಠ 6 ಕೆಜಿ ಮೇವು ಬೇಕು. ಸರ್ಕಾರವೇ ದುಡ್ಡು ಕೊಟ್ಟು ಗೋ ಶಾಲೆಗಳನ್ನು ನಡೆಸಬೇಕಾಗುತ್ತದೆ. ಸರ್ಕಾರದಿಂದ ಪ್ರಾಕ್ಟಿಕಲ್ ಆಗಿ ಗೋವುಗಳನ್ನು ಗೋಶಾಲೆಯಲ್ಲಿ ಸಾಕಲು ಸಾಧ್ಯವೇ? ಇದು ಸರ್ಕಾರಕ್ಕೂ ಹೊರೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಗೋ ಹತ್ಯೆ ನಿಷೇಧದಿಂದ ಚರ್ಮ ಉದ್ಯಮಕ್ಕೂ ಧಕ್ಕೆಯಾಗಲಿದೆ. 25 ಲಕ್ಷ ಕುಟುಂಬಗಳು ಚರ್ಮೋದ್ಯೋಗದಲ್ಲಿದ್ದಾರೆ. ಸುಮಾರು 8 ಲಕ್ಷ ಪರಿಶಿಷ್ಟ ಜಾತಿಯ ಜನರು ಚರ್ಮ ಸುಲಿಯುವ ಕೆಲಸ ನಂಬಿಯೇ ಬದುಕಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ರೈತರ ಆರ್ಥಿಕತೆ ಮೇಲೆ ದುಷ್ಪರಿಣಾಮ ಬೀರಲಿದೆ. ರೈತರು ವಯಸ್ಸಾದ ಹಸುಗಳನ್ನು ಬೀದಿಗೆ ಬಿಡಬೇಕಾಗುತ್ತದೆ. ಆಗ ಬೇರೆಯವರ ಜಮೀನುಗಳಿಗೆ ಹಸುಗಳು ನುಗ್ಗಿ ಗಲಾಟೆಗಳು  ಆಗುತ್ತವೆ. ಸಣ್ಣ ರೈತರು, ಕೂಲಿ ಕಾರ್ಮಿಕರಿಗೆ ದೊಡ್ಡ ಹೊಡೆತ ಬೀಳಲಿದೆ. ಮಹಿಳೆಯರು ಬಹಳಷ್ಟು ಮಂದಿ ಹೈನುಗಾರಿಕೆ ಮೇಲೆ ಅವಲಂಬಿತರಾಗಿದ್ದಾರೆ. ಈಗ ನಿಷೇಧ ಮಾಡಿದರೆ ಬಹಳಷ್ಟು ನಷ್ಟವಾಗಲಿದೆ‌ ಎಂದು ಹೇಳಿದರು.

ಚರ್ಮೋದ್ಯೋಗದಿಂದ 5.5 ಬಿಲಿಯನ್ ಡಾಲರ್ಸ್ ಜಿಡಿಪಿ ಆದಾಯ ಇದೆ. ವಾರಣಾಸಿಯ ಸ್ವರೂಪಾನಂದ ಸ್ವಾಮಿ ಸರಸ್ವತಿ ಹೇಳುವಂತೆ ಮೋದಿ ಸರ್ಕಾರ ಬಂದ ಮೇಲೆ ದನದ ಮಾಂಸ ರಫ್ತು ಜಾಸ್ತಿಯಾಗಿದೆ. ಹಾಗಾದರೆ ಬಿಜೆಪಿ ಸರ್ಕಾರ ಒಂದು ಕಡೆ ಗೋಮಾಂಸಕ್ಕೆ ಪರವಾನಿಗೆ ನೀಡಿ ಮತ್ತೊಂದು ಕಡೆ ನಿಯಂತ್ರಣ ಮಾಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದರು.

ಚರ್ಮೋದ್ಯೋಗದಲ್ಲಿ ನಮ್ಮ ದೇಶ ಎರಡನೇ ಸ್ಥಾನದಲ್ಲಿದೆ. ಚರ್ಮದ ಉತ್ಪನ್ನಗಳ ಮೇಲೆ ಸಾಕಷ್ಟು ಮಂದಿ ಅವಲಂಬಿತರಾಗಿದ್ದಾರೆ. ಈಗಲೇ ದೇಶದಲ್ಲಿ ನಿರುದ್ಯೋಗ ಹೆಚ್ಚಿದೆ. ಉದ್ಯೋಗ ಕೊಡಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಗೋಹತ್ಯೆ ನಿಷೇಧದಿಂದ ನಿರೋದ್ಯೋಗ ಇನ್ನೂ ಹೆಚ್ಚುತ್ತದೆ. ಕೇಂದ್ರ ಕಮಿಟಿ ರಚಿಸಿ ಒಂದು ತಜ್ಞರ ಕಮಿಟಿ ಮಾಡಲಿ. ವ್ಯಾಪಕವಾಗಿ ಚರ್ಚೆ ಆಗಲಿ. ವರದಿ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದರು.

ಇದ್ಯಾವುದೇ ಇಲ್ಲದೇ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಿಂದಾಗುವ ನಷ್ಟಕ್ಕೆ ಪರಿಹಾರ ಕೊಡುವವರು ಯಾರು? ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನಿಸಿದರು. ಅನುತ್ಪಾದಕ ಗೋವುಗಳನ್ನು ಸರ್ಕಾರವೇ ಕೊಂಡುಕೊಳ್ಳಲಿ. ಜನಸಾಮಾನ್ಯರ ಮೇಲೆ ಏಕೆ ಹೊರೆ ಹಾಕುತ್ತೀರಿ. ಬಿಜೆಪಿ ಬೆಂಬಲಿಗರೇ ಗೋಮಾಂಸ ರಫ್ತು ಮಾಡುತ್ತಿದ್ದಾರೆ. ಸ್ಪೀಕರ್ ಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತದೆ. ಸ್ಪೀಕರ್ ಆರ್ ಎಸ್ ಎಸ್ ಕಡೆಯವರು. ಅದಕ್ಕೆ ಮಾಡಿಕೊಳ್ಳಲಿ ಎಂದು ಸುಮ್ಮನಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT