ಸಾಂದರ್ಭಿಕ ಚಿತ್ರ 
ರಾಜಕೀಯ

ತುಮಕೂರು: ಸತತ ಎರಡನೇ ಬಾರಿ ಗೆಲುವಿನ ವಿಶ್ವಾಸದಲ್ಲಿ ತೃತೀಯಲಿಂಗಿ ಅಭ್ಯರ್ಥಿ

37 ವರ್ಷದ ಫಾಜ್ಲೂನ್ ಗುಬ್ಬಿ ತಾಲೂಕಿನ ಕುನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿ ಚಾಕೇನಹಳ್ಳಿಯಿಂದ ಸ್ಪರ್ಧಿಸಿದ್ದು ಡಿಸೆಂಬರ್ 22ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ತುಮಕೂರು: ಸತತ ಎರಡನೇ ಬಾರಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲ್ಲಲು ತೃತೀಯ ಲಿಂಗಿ ಮತ್ತವರ ಕುಟುಂಬ ಪರಿಶ್ರಮ ಪಡುತ್ತಿದೆ.

37 ವರ್ಷದ ಫಾಜ್ಲೂನ್ ಗುಬ್ಬಿ ತಾಲೂಕಿನ ಕುನ್ನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿ ಚಾಕೇನಹಳ್ಳಿಯಿಂದ ಸ್ಪರ್ಧಿಸಿದ್ದು ಡಿಸೆಂಬರ್ 22ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಕಳೆದ ಬಾರಿ 247 ಮತ ಪಡೆದಿದ್ದ ಪಾಜ್ಲೂನ್ 47 ಮತಗಳ ಅಂತರದಿಂದ ತನ್ನ ಇಬ್ಬರು ವಿರೋಧಿಗಳ ವಿರುದ್ಧ ಗೆಲುವು ಸಾಧಿಸಿದ್ದರು.  ಈ ಬಾರಿ ನೇರ ಹಣಾಹಣಿ ಏರ್ಪಟ್ಟಿದೆ.

ತಾನು ಎರಡು ದಶಕಗಳಿಂದ ತನ್ನ ಹಳ್ಳಿಯ ಜನರಿಗೆ ಸೇವೆ ಸಲ್ಲಿಸಿದ್ದೇನೆ ಮತ್ತು ಕಳೆದ ಐದು ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಪ್ರಾರಂಭಿಸಿದ್ದೇನೆ ಎಂದು ಫಜ್ಲೂನ್ ಹೇಳಿಕೊಂಡಿದ್ದಾರೆ, "ನಿವಾಸಿಗಳಿಗೆ ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡಿದ್ದೇನೆ ಮತ್ತು ಆದ್ದರಿಂದ ಎರಡನೇ ಬಾರಿಗೆ ನನ್ನ ಗೆಲುವು ಖಚಿತವಾಗಿದೆ" ಎಂದು ಅವರು ಆತ್ಮ ವಿಶ್ವಾಸದಿಂದ ಹೇಳಿದ್ದಾರೆ.ನಮ್ಮ ಪೋಷಕರನ್ನು ಹಾಗೂ ನನ್ನನ್ನು ಹಳ್ಳಿಯ ಜನತೆ ಯಾವತ್ತೂ ತಾರತಮ್ಯದಿಂದ ನೋಡಿಲ್ಲ ಎಂದು ಫಾಜ್ಲೂನ್ ತಿಳಿಸಿದ್ದಾರೆ.

ಫಾಜ್ಲೂನ್ ಜೊತೆ ಆಕೆಯ ತೃತೀಯ ಲಿಂಗಿ ಸಹೋದರ ಸೇರಿದಂತೆ ಒಟ್ಟು 14 ಮಂದಿ ಕುಟುಂಬದ ಸದಸ್ಯರು ಆಕೆಗೆ ಬೆಂಬಲವಾಗಿ ನಿಂತಿದ್ದಾರೆ.  ತುಮಕೂರಿನ ತರಕಾರಿ ಮಾರುಕಟ್ಟೆಯಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದೇನೆ, ನನ್ನ ಸಹೋದರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ, ಹೀಗಾಗಿ ನನ್ನೆಲ್ಲಾ ಸಮಯವನ್ನು ಆಕೆಯ ಚುನಾವಣಾ ಪ್ರಚಾರಕ್ಕಾಗಿ ಮೀಸಲಿಟ್ಟಿದ್ದೇನೆ ಎಂದು ಆಕೆಯ ಸಹೋದರ ಮೊಯಿನುದ್ದೀನ್ ಹೇಳಿದ್ದಾರೆ.

ತೃತೀಯ ಲಿಂಗಿ ಸಮುದಾಯವು ಭಿಕ್ಷೆ ಬೇಡುವ ಬದಲು ಉದ್ಯೋಗ ಮಾಡಿಕೊಂಡು ಜೀವನ ಸಾಗಿಸಿದರೇ ಅವರ ಆತ್ಮಗೌರವ ಮತ್ತು ಸ್ವಾಭಿಮಾನ ಹೆಚ್ಚಾಗುತ್ತದೆ ಎಂದು ಫಾಜ್ಲೂನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!