ಎಹೆಚ್. ವಿಶ್ವನಾಥ್ 
ರಾಜಕೀಯ

ಅರ್ಕಾವತಿ ಕೇಸ್‌ನಲ್ಲಿ ಜೈಲಿಗೆ ಹೋಗೋ ಭಯದಿಂದ ಲೋಕಾಯುಕ್ತ ಮುಚ್ಚಿ ಎಸಿಬಿ ತಂದಿದ್ದರು ಸಿದ್ದರಾಮಯ್ಯ: ಹೆಚ್.ವಿಶ್ವನಾಥ್

ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಬೆಂಗಳೂರು: ಅರ್ಕಾವತಿ ಕೇಸ್'ನಲ್ಲಿ ಜೈಲಿಗೆ ಹೋಗುತ್ತೇನೆಂದು ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು ಮಾಜಿ ಸಿಎಂ ಸಿದ್ದರಾಮಯ್ಯ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುತ್ತಿದ್ದರು. ಅದಕ್ಕಾಗಿಯೇ ಲೋಕಾಯುಕ್ತವನ್ನು ಮುಚ್ಚಿ ಎಸಿಬಿ ತಂದಿದ್ದರು. ಮತ್ತೆ ಅರ್ಕಾವತಿ ಕೇಸ್ ತೆರೆದರೆ ನೀವು ಎಲ್ಲಿರುತ್ತೀರೆಂದು ತಿಳಿಯುತ್ತದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 

ಇದೇ ವೇಳೆ ನನ್ನನ್ನು ಯಾವ ಕಾರಣಕ್ಕೆ ಸೋಲಿಸಿದಿರಿ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಯಾವ ಕಾರಣಕ್ಕೆ ಸೋಲು ಕಂಡೆ ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ಡೆಮಾಲಿಶ್ ಮಾಡಿಬಿಟ್ಟರು ಎಂದುಪ ಹೇಳಿದ್ದಾರೆ. 

ಸದಾ ಬೆನ್ನಿಗೆ ಚೂರಿ ಇರೀತಿದ್ದವರಿಗೆ ಈ ನೋವು ಅರ್ಥವಾಗುತ್ತಿದೆ. ಬೇರೆಯವರ ಬೆನ್ನಿಗೆ ಚೂರಿ ಇರಿದು ಆನಂದ ಪಡುತ್ತಿದ್ದರು. ವಿಘ್ನ ಸಂತೋಷಿಗಳಾಗಿದ್ದವರಿಗೆ ಈಗ ನೋವಾಗುತ್ತಿದೆ ಎಂದು ಟಾಂಗ್ ನೀಡಿದ್ದಾರೆ. 

ನಿಮ್ಮದು ಮಾತ್ರ ರಕ್ತ, ಮಾಂಸ, ಮೂಳೆ. ನಮ್ಮದು ತಗಡು ಅಥವಾ ಮರಾನಾ? ನೀವು ಚೂರಿ ಇರಿಯೂವಾಗ ಅದನ್ನು ಗಮನಿಸಲೂ ಇಲ್ಲ. ನಾವು ಎಂತಹ ನೋವು ಅನುಭವಿಸಿದೆವು ಗೊತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. 

ಜೊತೆಗೆ, ಸಿದ್ದರಾಮಯ್ಯ ಚಾಮುಂಡೇಶ್ವರಿ ಬಿಟ್ಟು ಏಕೆ ಓಡಿ ಹೋದ್ರಿ? ನಿಮಗೆ ಸೋಲಿನ ಸುಳಿವು ತಿಳಿದ ಹಿನ್ನೆಲೆ ಓಡಿ ಹೋಗಿದ್ದೀರಿ. ನಿಮ್ಮ ಜನಪರ ಕಾರ್ಯ ಯೋಜನೆ ಏಕೆ ಕೈಹಿಡಿಯಲಿಲ್ಲ? ನೀವು ಚಾಮುಂಡೇಶ್ವರಿ ಕ್ಷೇತ್ರವನ್ನು ಕಡೆಗಣಿಸಿದ್ದೀರಿ. ನೀವು ಯಾರೋ ಕೆಲವು ಚಮಚಗಳ ಕೈಹಿಡಿದಿರಬಹುದು. ಅದಕ್ಕೆ ನೀವು ಬಾದಾಮಿ ಕ್ಷೇತ್ರದ ಕಡೆ‌ ಮುಖ‌ ಮಾಡಿದಿರಿ. ಯಾವ ಮತದಾರರೂ ನಿಮ್ಮನ್ನು ಸೋಲಿಸಲಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT