ವಿವಿಧ ಜಿಲ್ಲೆಗಳ ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯ 
ರಾಜಕೀಯ

ಗ್ರಾಮ ಪಂಚಾಯಿತಿ ಚುನಾವಣೆ ಪ್ರಗತಿಯಲ್ಲಿ: ಬೆಳಗಾವಿಯಲ್ಲಿ ಮತಗಟ್ಟೆಯ ಒಳಗೆ ಪಿಸ್ತೂಲ್ ತಂದ ಸಿಬ್ಬಂದಿ ಬಂಧನ 

ಗ್ರಾಮ ಪಂಚಾಯತ್ ಚುನಾವಣೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳ ಮತಗಟ್ಟೆಗಳಿಗೆ ಬೆಳಗ್ಗೆಯಿಂದಲೇ ಮತದಾರರು ಆಗಮಿಸಿ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ.

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳ ಮತಗಟ್ಟೆಗಳಿಗೆ ಬೆಳಗ್ಗೆಯಿಂದಲೇ ಮತದಾರರು ಆಗಮಿಸಿ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ.
ಇಂದು ಬೆಳಗ್ಗೆಯಿಂದ ಪುರುಷರು, ಮಹಿಳೆಯರು, ವಯೋವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂತು.

ಸಿಬ್ಬಂದಿ ಬಂಧನ: ಬೆಳಗಾವಿಯ ದೆಸೂರು ಗ್ರಾಮದಲ್ಲಿ ಮತಗಟ್ಟೆಗೆ ಪಿಸ್ತೂಲ್ ತಂದಿದ್ದ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು, ಕೆ ಆರ್ ನಗರ, ಪೆರಿಯಾಪಟ್ಟಣ, ಹೆಚ್ ಡಿ ಕೋಟೆ ಮತತ್ು ಸರ್ಗೂರು ತಾಲ್ಲೂಕುಗಳ 148 ಗ್ರಾಮ ಪಂಚಾಯತ್ ಗಳಿಗೆ ಮತದಾನ ನಡೆಯುತ್ತಿದ್ದು 2,180 ಹುದ್ದೆಗಳಿಗೆ 6,165 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಇಂದು ಸಾಯಂಕಾಲ ಮತದಾನ ಪ್ರಕ್ರಿಯೆಯ ಕೊನೆಯ ಅವಧಿಯಲ್ಲಿ ಕೋವಿಡ್ ಪಾಸಿಟಿವ್ ಹೊಂದಿರುವ ಮತದಾರರಿಗೂ ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಲಾಗುತ್ತದೆ. ಅವರ ಜೊತೆ ಆರೋಗ್ಯಾಧಿಕಾರಿಗಳು ಇರುತ್ತಾರೆ.

ಬೆಂಗಳೂರು ನಗರದಲ್ಲಿ 2 ಲಕ್ಷ ಮತದಾರರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಕೆಲವು ಕ್ಷೇತ್ರಗಳಿದ್ದು ಸುಮಾರು 2 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಂಗಳೂರು ಉತ್ತರದ 11 ಮತ್ತು ಯಲಹಂಕ ತಾಲ್ಲೂಕುಗಳ 15 ಗ್ರಾಮ ಪಂಚಾಯತ್ ಗಳಿಗೆ ಇಂದು ಮತದಾನ ನಡೆಯಲಿದ್ದು ಬೆಂಗಳೂರು ಉತ್ತರದಲ್ಲಿ 98,422 ಮತದಾರರು, 538 ಅಭ್ಯರ್ಥಿಗಳು 233 ಸ್ಥಾನಗಳಿಗೆ ಸ್ಪರ್ಧಿಸುತ್ತಿದ್ದಾರೆ. ಯಲಹಂಕ ವಲಯದಲ್ಲಿ ಸುಮಾರು 1.2 ಲಕ್ಷ ಮತದಾರರಿದ್ದು 719 ಸ್ಪರ್ಧಿಗಳು 298 ಸೀಟುಗಳಿಗೆ ಸ್ಪರ್ಧಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ತಿಳಿಸಿದ್ದಾರೆ. 

ಕೋಲಾರದ ಮಾಲೂರು ತಾಲ್ಲೂಕಿನ ಕಂಬಿಪುರ ಬೂತ್ ಸಂಖ್ಯೆ 17ರಲ್ಲಿ ಮತದಾರರು ತಮ್ಮ ಗ್ರಾಮಕ್ಕೆ ರಸ್ತೆ ಸೌಲಭ್ಯವನ್ನು ಮೊದಲು ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂದು ಮತ ಹಾಕುವುದಕ್ಕೆ ಬಹಿಷ್ಕಾರ ಹಾಕಿದ್ದಾರೆ. ಹಾಗಾಗಿ ಮತಗಟ್ಟೆಯಲ್ಲಿ ಸಿಬ್ಬಂದಿ ಸಾಧನಗಳೊಂದಿಗೆ ಮತದಾರರಿಗೆ ಕಾಯುತ್ತಿರುವ ಪರಿಸ್ಥಿತಿ ಇಂದು ಬೆಳಗ್ಗೆ ಕಂಡುಬಂತು. 

ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿ ಮೈದಾಲಾ ಗ್ರಾಮ ಪಂಚಾಯತ್ ನ ಮತಗಟ್ಟೆಯಲ್ಲಿ ಇಂದು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿದರು.

 ಎಣಿಕೆ ಫಲಿತಾಂಶ ಡಿಸೆಂಬರ್ 30ರಂದು ಪ್ರಕಟವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT