ವಿವಿಧ ಜಿಲ್ಲೆಗಳ ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ ಕಂಡುಬಂದ ದೃಶ್ಯ 
ರಾಜಕೀಯ

ಗ್ರಾಮ ಪಂಚಾಯಿತಿ ಚುನಾವಣೆ ಪ್ರಗತಿಯಲ್ಲಿ: ಬೆಳಗಾವಿಯಲ್ಲಿ ಮತಗಟ್ಟೆಯ ಒಳಗೆ ಪಿಸ್ತೂಲ್ ತಂದ ಸಿಬ್ಬಂದಿ ಬಂಧನ 

ಗ್ರಾಮ ಪಂಚಾಯತ್ ಚುನಾವಣೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳ ಮತಗಟ್ಟೆಗಳಿಗೆ ಬೆಳಗ್ಗೆಯಿಂದಲೇ ಮತದಾರರು ಆಗಮಿಸಿ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ.

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗೆ ಮೊದಲ ಹಂತದ ಮತದಾನ ಪ್ರಗತಿಯಲ್ಲಿದ್ದು ರಾಜ್ಯದ ಹಲವು ಗ್ರಾಮ ಪಂಚಾಯತ್ ಗಳ ಮತಗಟ್ಟೆಗಳಿಗೆ ಬೆಳಗ್ಗೆಯಿಂದಲೇ ಮತದಾರರು ಆಗಮಿಸಿ ತಮ್ಮ ಹಕ್ಕುಗಳನ್ನು ಚಲಾಯಿಸುತ್ತಿದ್ದಾರೆ.
ಇಂದು ಬೆಳಗ್ಗೆಯಿಂದ ಪುರುಷರು, ಮಹಿಳೆಯರು, ವಯೋವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂತು.

ಸಿಬ್ಬಂದಿ ಬಂಧನ: ಬೆಳಗಾವಿಯ ದೆಸೂರು ಗ್ರಾಮದಲ್ಲಿ ಮತಗಟ್ಟೆಗೆ ಪಿಸ್ತೂಲ್ ತಂದಿದ್ದ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು, ಕೆ ಆರ್ ನಗರ, ಪೆರಿಯಾಪಟ್ಟಣ, ಹೆಚ್ ಡಿ ಕೋಟೆ ಮತತ್ು ಸರ್ಗೂರು ತಾಲ್ಲೂಕುಗಳ 148 ಗ್ರಾಮ ಪಂಚಾಯತ್ ಗಳಿಗೆ ಮತದಾನ ನಡೆಯುತ್ತಿದ್ದು 2,180 ಹುದ್ದೆಗಳಿಗೆ 6,165 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಇಂದು ಸಾಯಂಕಾಲ ಮತದಾನ ಪ್ರಕ್ರಿಯೆಯ ಕೊನೆಯ ಅವಧಿಯಲ್ಲಿ ಕೋವಿಡ್ ಪಾಸಿಟಿವ್ ಹೊಂದಿರುವ ಮತದಾರರಿಗೂ ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಲಾಗುತ್ತದೆ. ಅವರ ಜೊತೆ ಆರೋಗ್ಯಾಧಿಕಾರಿಗಳು ಇರುತ್ತಾರೆ.

ಬೆಂಗಳೂರು ನಗರದಲ್ಲಿ 2 ಲಕ್ಷ ಮತದಾರರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಕೆಲವು ಕ್ಷೇತ್ರಗಳಿದ್ದು ಸುಮಾರು 2 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಂಗಳೂರು ಉತ್ತರದ 11 ಮತ್ತು ಯಲಹಂಕ ತಾಲ್ಲೂಕುಗಳ 15 ಗ್ರಾಮ ಪಂಚಾಯತ್ ಗಳಿಗೆ ಇಂದು ಮತದಾನ ನಡೆಯಲಿದ್ದು ಬೆಂಗಳೂರು ಉತ್ತರದಲ್ಲಿ 98,422 ಮತದಾರರು, 538 ಅಭ್ಯರ್ಥಿಗಳು 233 ಸ್ಥಾನಗಳಿಗೆ ಸ್ಪರ್ಧಿಸುತ್ತಿದ್ದಾರೆ. ಯಲಹಂಕ ವಲಯದಲ್ಲಿ ಸುಮಾರು 1.2 ಲಕ್ಷ ಮತದಾರರಿದ್ದು 719 ಸ್ಪರ್ಧಿಗಳು 298 ಸೀಟುಗಳಿಗೆ ಸ್ಪರ್ಧಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ ಎನ್ ಶಿವಮೂರ್ತಿ ತಿಳಿಸಿದ್ದಾರೆ. 

ಕೋಲಾರದ ಮಾಲೂರು ತಾಲ್ಲೂಕಿನ ಕಂಬಿಪುರ ಬೂತ್ ಸಂಖ್ಯೆ 17ರಲ್ಲಿ ಮತದಾರರು ತಮ್ಮ ಗ್ರಾಮಕ್ಕೆ ರಸ್ತೆ ಸೌಲಭ್ಯವನ್ನು ಮೊದಲು ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂದು ಮತ ಹಾಕುವುದಕ್ಕೆ ಬಹಿಷ್ಕಾರ ಹಾಕಿದ್ದಾರೆ. ಹಾಗಾಗಿ ಮತಗಟ್ಟೆಯಲ್ಲಿ ಸಿಬ್ಬಂದಿ ಸಾಧನಗಳೊಂದಿಗೆ ಮತದಾರರಿಗೆ ಕಾಯುತ್ತಿರುವ ಪರಿಸ್ಥಿತಿ ಇಂದು ಬೆಳಗ್ಗೆ ಕಂಡುಬಂತು. 

ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿ ಮೈದಾಲಾ ಗ್ರಾಮ ಪಂಚಾಯತ್ ನ ಮತಗಟ್ಟೆಯಲ್ಲಿ ಇಂದು ಬೆಳಗ್ಗೆಯೇ ತಮ್ಮ ಹಕ್ಕು ಚಲಾಯಿಸಿದರು.

 ಎಣಿಕೆ ಫಲಿತಾಂಶ ಡಿಸೆಂಬರ್ 30ರಂದು ಪ್ರಕಟವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT