ಸಂಗ್ರಹ ಚಿತ್ರ 
ರಾಜಕೀಯ

ಮೇಲ್ಮನೆಯಲ್ಲಿ ಗದ್ದಲ: ಸಭಾಪತಿ ನೋಟಿಸ್ ಗೆ ಸ್ಪಷ್ಟೀಕರಣ ನೀಡಿದ ಕಾರ್ಯದರ್ಶಿ

ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಬೆಂಗಳೂರು: ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಸಭಾಪತಿಗೆ ಮೂರು ಪುಟಗಳ ಪತ್ರದ ಮೂಲಕ ಸದನದಲ್ಲಿ ನಡೆದ ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದಲ್ಲಿ ತಮ್ಮಿಂದ ಯಾವುದೇ ತಪ್ಪಾಗಿಲ್ಲ ಎನ್ನುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸದನದ ಬೆಲ್ ನಡೆಯುತ್ತಿರುವಾಗಲೇ ಉಪ ಸಭಾಪತಿ ಧರ್ಮೇಗೌಡರು ಸಭಾಪತಿ ಸ್ಥಾನದ ಮೇಲೆ ಕುಳಿತಿರುವುದರ ಹಿಂದೆ ಷಡ್ಯಂತ್ರ ಇದೆ, ಹಾಗೂ ಅದರಲ್ಲಿ ಕಾರ್ಯದರ್ಶಿಗಳೂ ಭಾಗಿಯಾರುವ ಬಗ್ಗೆ ಸಭಾಪತಿ ಅನುಮಾನ ವ್ಯಕ್ತಪಡಿಸಿ ಸೂಕ್ತ ಮಾಹಿತಿ ನೀಡುವಂತೆ ನೊಟೀಸ್ ನೀಡಿದ್ದರು.

ಉಪ ಸಭಾಪತಿಗಳು ಸಭಾಪತಿ ಪೀಠದ ಮೇಲೆ ಕುಳಿತುಕೊಂಡಾಗ ಅವರಿಗೆ ಸಭಾಪತಿ ಇರುವಾಗ ತಾವು ಕೂಡಬೇಕೊ ಬೇಡವೋ ಎನ್ನುವ ಮಾಹಿತಿಯ ಪತ್ರ ನೀಡಿರುವುದಾಗಿ ಕಾರ್ಯದರ್ಶಿ ಸಭಾಪತಿ ನೋಟಿಸ್ ಸ್ಪಷ್ಟೀಕರಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸದನದಲ್ಲಿ ಗಲಾಟೆ ನಡೆದ ಸಂದರ್ಭದಲ್ಲಿ ಸಚಿವರು ಹಿರಿಯ ಸದಸ್ಯರು ಹಾಜರಿದ್ದರು ಎಂಬ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ತಮ್ಮಿಂದ ಯಾವುದೇ ಲೋಪವಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT