ಸಂಗ್ರಹ ಚಿತ್ರ 
ರಾಜಕೀಯ

ಮೇಲ್ಮನೆಯಲ್ಲಿ ಗದ್ದಲ: ಸಭಾಪತಿ ನೋಟಿಸ್ ಗೆ ಸ್ಪಷ್ಟೀಕರಣ ನೀಡಿದ ಕಾರ್ಯದರ್ಶಿ

ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಬೆಂಗಳೂರು: ಡಿಸೆಂಬರ್ 15 ರಂದು ವಿಧಾನ ಪರಿಷತ್ತಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ನೋಟಿಸ್ ನೀಡಿದ್ದ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರಿಗೆ ವಿಧಾನ ಪರಿಷತ್ತಿನ ಕಾರ್ಯದರ್ಶಿ ಮಹಾಲಕ್ಷ್ಮಿ ಪತ್ರದ ಮೂಲಕ ಉತ್ತರ ನೀಡಿದ್ದಾರೆ.

ಸಭಾಪತಿಗೆ ಮೂರು ಪುಟಗಳ ಪತ್ರದ ಮೂಲಕ ಸದನದಲ್ಲಿ ನಡೆದ ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ ಎನ್ನಲಾಗಿದ್ದು, ಈ ಪ್ರಕರಣದಲ್ಲಿ ತಮ್ಮಿಂದ ಯಾವುದೇ ತಪ್ಪಾಗಿಲ್ಲ ಎನ್ನುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಸದನದ ಬೆಲ್ ನಡೆಯುತ್ತಿರುವಾಗಲೇ ಉಪ ಸಭಾಪತಿ ಧರ್ಮೇಗೌಡರು ಸಭಾಪತಿ ಸ್ಥಾನದ ಮೇಲೆ ಕುಳಿತಿರುವುದರ ಹಿಂದೆ ಷಡ್ಯಂತ್ರ ಇದೆ, ಹಾಗೂ ಅದರಲ್ಲಿ ಕಾರ್ಯದರ್ಶಿಗಳೂ ಭಾಗಿಯಾರುವ ಬಗ್ಗೆ ಸಭಾಪತಿ ಅನುಮಾನ ವ್ಯಕ್ತಪಡಿಸಿ ಸೂಕ್ತ ಮಾಹಿತಿ ನೀಡುವಂತೆ ನೊಟೀಸ್ ನೀಡಿದ್ದರು.

ಉಪ ಸಭಾಪತಿಗಳು ಸಭಾಪತಿ ಪೀಠದ ಮೇಲೆ ಕುಳಿತುಕೊಂಡಾಗ ಅವರಿಗೆ ಸಭಾಪತಿ ಇರುವಾಗ ತಾವು ಕೂಡಬೇಕೊ ಬೇಡವೋ ಎನ್ನುವ ಮಾಹಿತಿಯ ಪತ್ರ ನೀಡಿರುವುದಾಗಿ ಕಾರ್ಯದರ್ಶಿ ಸಭಾಪತಿ ನೋಟಿಸ್ ಸ್ಪಷ್ಟೀಕರಣ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಸದನದಲ್ಲಿ ಗಲಾಟೆ ನಡೆದ ಸಂದರ್ಭದಲ್ಲಿ ಸಚಿವರು ಹಿರಿಯ ಸದಸ್ಯರು ಹಾಜರಿದ್ದರು ಎಂಬ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ತಮ್ಮಿಂದ ಯಾವುದೇ ಲೋಪವಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!

ಶಾಲೆಗಳಿಗೆ ಯೂಟ್ಯೂಬರ್‌ಗಳು, ಸೋಷಿಯಲ್ ಮೀಡಿಯಾ ಮಂದಿಗೆ ನೋ ಎಂಟ್ರಿ: ಉತ್ತರ ಪ್ರದೇಶ ಸರ್ಕಾರದ ಖಡಕ್ ಆದೇಶ

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್