ಸಿದ್ದರಾಮಯ್ಯ 
ರಾಜಕೀಯ

ಸ್ವಪಕ್ಷದವರೇ ಚೂರಿ ಇರಿದರು: 'ಕೈ' ನಾಯಕರ ಕಣ್ಣು ಕೆಂಪಾಗಿಸಿದ ಸಿದ್ದರಾಮಯ್ಯ ಹೇಳಿಕೆ

ಸ್ವಪಕ್ಷದವರೇ ನಾನು ಸೋಲು ಕಾಣುವಂತೆ ಮಾಡಿದ್ದರು, ನನ್ನ ಬೆನ್ನಿಗೆ ಚೂರಿ ಹಾಕಿದರು ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿದೆ. 

ಮೈಸೂರು: ಸ್ವಪಕ್ಷದವರೇ ನಾನು ಸೋಲು ಕಾಣುವಂತೆ ಮಾಡಿದ್ದರು, ನನ್ನ ಬೆನ್ನಿಗೆ ಚೂರಿ ಹಾಕಿದರು ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರ ಕಣ್ಣು ಕೆಂಪಗಾಗುವಂತೆ ಮಾಡಿದೆ. 

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ವಪಕ್ಷದ ಒಳಸಂಚಿನಿಂದ ನಾನು ಸೋಲಬೇಕಾಯಿತು. ನನ್ನ ಬೆನ್ನಿಗೆ ಚೂರಿ ಇರಿದರು. ಆದರೆ, ಬಾದಾಮಿ ಜನ ನನ್ನ ಕೈ ಹಿಡಿದ್ರು. ಒಂದು ವೇಳೆ ಅಲ್ಲೂ ಕೂಡ ಸೋತಿದ್ದಿದ್ರೆ ನನ್ನ ರಾಜಕೀಯ ಭವಿಷ್ಯ ಏನಾಗುತ್ತಿತ್ತಿ ಎಂದು ಹೇಳಿದ್ದರು. ಈ ಹೇಳಿಕೆ ಇದೀಗ ಕೈಪಾಳಯದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದೆ. 

ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಎ.ಹೆಚ್.ವಿಶ್ವನಾಥ್ ಅವರು, ಸಿದ್ದರಾಮಯ್ಯ ಅವರು ನನ್ನನ್ನು ಸೇರಿ ಕಾಂಗ್ರೆಸ್ ನಲ್ಲಿದ್ದ ಸಾಕಷ್ಟು ಜನರಿಗೆ ತಾವು ಮುಖ್ಯಮಂತ್ರಿಯಾಗುವ ಸಲುವಾಗಿ ಬೆನ್ನಿಗೆ ಚೂರಿ ಇರಿದಿದ್ದರು. ಇದೀಗ ಅವರಿಗೆ ಆ ನೋವು ಅರ್ಥವಾಗುತ್ತಿದೆ ಎಂದು ಹೇಳಿದ್ದಾರೆ. 

ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು, ಚುನಾವಣೆ ನಡೆದು ಎರಡು ವರ್ಷಗಳಾದ ಬಳಿಕ ಈ ವಿಚಾರದ ಕುರಿತು ಏಕೆ ಮಾತನಾಡಲಾಗುತ್ತಿದೆ? ಇಂತಹ ಹೇಳಿಕೆಗಳು ಪಕ್ಷದ ಕಾರ್ಯಕರ್ತರಲ್ಲಿ ನಿರಾಶೆಗಳನ್ನು ಮೂಡಿಸುತ್ತದೆ ಎಂದು ಹೇಳಿದ್ದಾರೆ. 

ಈ ನಡುವೆ ಹೇಳಿಕೆ ನೀಡಿರುವ ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ಆರ್.ಧ್ರುವನಾರಾಯಣ್ ಅವರು, ಬೇರೆ ಪಕ್ಷಗಳು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಹಿಡಿದು ರಾಜಕೀಯ ಮಾಡುತ್ತಿವೆ. ಆದರೆ, ಪಕ್ಷದ ನಾಯಕರ ಗಮನ ಮತದಾರರನ್ನು ತಲುಪುದಾಗಿದ್ದು, ಸರ್ಕಾರದ ವೈಫಲ್ಯಗಳನ್ನು ತಿಳಿಸುತ್ತೇವೆಂದು ತಿಳಿಸಿದ್ದಾರೆ. 

ರಾಜಕೀಯ ತಜ್ಞ ಪ್ರೊ.ಮುಝಾಫರ್ ಅಸಾದಿಯವರು ಮಾತನಾಡಿ, ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯವಾಗಿ ತಮ್ಮ ಪ್ರತಿಸ್ಪರ್ಧಿಗಳನ್ನು ಸ್ಥಳೀಯವಾಗಿ ಮುಗಿಸುವ ಉದ್ದೇಶವನ್ನು ಹೊಂದಿದೆ ಎಂದಿದ್ದಾರೆ. 

ತಮ್ಮ ಹೇಳಿಕೆ ಸಂಬಂಧ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿರುವ ಸ್ಥಳೀಯ ನಾಯಕರ ಕುರಿತು ನಾನು ಹೇಳಿದೆ ನೀಡಿದ್ದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..'.: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು

West Asia war ಎಫೆಕ್ಟ್: ಭಾರತೀಯ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ; ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

‘ರಾಜಿ ಮಾಡಿಕೊಂಡ ಪ್ರಧಾನಿ ದೇಶ ನಡೆಸಲು ಅಸಮರ್ಥ’: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಇರಾನ್ ನಗು ದೀರ್ಘಕಾಲ ಉಳಿಯಲ್ಲ: ಶಾಂತಿ ಪ್ರಸ್ತಾವನೆ ಮಾತುಕತೆ ನಡುವೆ ಟ್ರಂಪ್ ಎಚ್ಚರಿಕೆ!

3 ವರ್ಷ ಪೂರೈಸುವ ಮುನ್ನ ದೆಹಲಿಗೆ ಸಿದ್ದರಾಮಯ್ಯ ದೌಡು: ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ..!

SCROLL FOR NEXT