ಪ್ರತಾಪ್ ಸಿಂಹ 
ರಾಜಕೀಯ

ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಪಾಲಿಕೆ ಮೇಯರ್ ಸ್ಥಾನ ನಮಗೆ ಬೇಕೆ ಬೇಕು: ಪ್ರತಾಪ್ ಸಿಂಹ

ಈ ಬಾರಿ ಬಿಜೆಪಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸ್ಥಾನ ಬೇಕೇ ಬೇಕು. ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಮೇಯರ್ ಸ್ಥಾನ ನಮಗೆ ಕೊಡಿ ಎಂದು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.

ಮೈಸೂರು: ಈ ಬಾರಿ ಬಿಜೆಪಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಸ್ಥಾನ ಬೇಕೇ ಬೇಕು. ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಮೇಯರ್ ಸ್ಥಾನ ನಮಗೆ ಕೊಡಿ ಎಂದು ಸಂಸದ ಪ್ರತಾಪಸಿಂಹ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಾಲಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ. 22 ಸ್ಥಾನ ‌ಇರುವ ನಮಗೆ ಯಾರು ಬೇಕಾದರೂ ಸಹಕಾರ ನೀಡಬಹುದು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಮೈಸೂರು ಪಾಲಿಕೆಯಲ್ಲೂ ಬಿಜೆಪಿ ಪಕ್ಷವೇ ಅಧಿಕಾರದಲ್ಲಿ ಇದ್ದರೆ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಹಿಂದೆ ಜೆಡಿಎಸ್‌ ಜೊತೆ ಹೊಂದಾಣಿಕೆ ಆಗಿದ್ದಾಗ ನಾಲ್ಕು ಬಾರಿ ಉಪಮೇಯರ್ ಮಾತ್ರ ಆಗಿದ್ದೇವೆ. ಈ ಬಾರಿ ಯಾರ ಜೊತೆ ಹೊಂದಾಣಿಕೆ ಆದರೂ ಮೇಯರ್ ಸ್ಥಾನ ನಮಗೇ ಬೇಕು. ನಿಮಗೆಲ್ಲ ಸಾಕಷ್ಟು ಅವಕಾಶ ಕೊಟ್ಟಾಗಿದೆ. ನಮಗೂ ಒಮ್ಮೆ ಪಾಲಿಕೆಯಲ್ಲಿ ಮೇಯರ್ ಸ್ಥಾನ ನೀಡಿ ಅವಕಾಶ ಕೊಡಿ ಎಂದು ಹೇಳಿದ್ದಾರೆ.

ಮೈಸೂರು ಸಿಟಿ ಕಾರ್ಪೊರೇಶನ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿರಿಸಲು ಬಿಜೆಪಿ ಮತ್ತು ಜೆಡಿಎಸ್ ಮುಂದಾಗಿದೆ,  ಕೇಸರಿ ಪಕ್ಷವು ಅಂತಹ ಮೈತ್ರಿಗೆ ಬಾಗಿಲು ತೆರೆದಿದೆ, ಅದು ಮೇಯರ್ ಹುದ್ದೆಯನ್ನು ಪಡೆದರೆ ಮೈತ್ರಿ ಎಂದು ತಿಳಿಸಿದೆ. ಪ್ರಸ್ತುತ ಇರುವ ಜೆಡಿಎಸ್ ಮೇಯರ್ ತಸ್ನೀಮ್ ಅವರ ಅಧಿಕಾರವಧಿ ಜನವರಿ 15ಕ್ಕೆ ಮುಗಿಯಲಿದೆ.

ಕಾಂಗ್ರೆಸ್ ಪಕ್ಷದ ಮೇಯರ್ ಇದ್ದಾಗ ಸಂಪೂರ್ಣ ಸಹಕಾರ ಕೊಟ್ಟಿದ್ದೆವು. ಆದರೆ, ಹಿಂದುಳಿದ ವರ್ಗಕ್ಕೆ ಸೇರಿದ ಅದರಲ್ಲೂ ಅಲ್ಪಸಂಖ್ಯಾತ ಮುಸ್ಲಿಂ ಮಹಿಳೆ ಮಹಾಪೌರರಾಗಿದ್ದರೂ ಕಾಂಗ್ರೆಸ್ ಅಸಹಕಾರ ತೋರಿತು. ಕೌನ್ಸಿಲ್ ಸಭೆಯಲ್ಲಿ ಅಸಹಕಾರ ತೋರುವ ಜತೆಗೆ ಪ್ರತಿಯೊಂದು ವಿಚಾರಕ್ಕೂ ಮೂಗು ತೋರಿಸಿದ್ದಾರೆ. ಇಂತಹವರಿಗೆ ಮೈತ್ರಿ ಮುಂದುವರೆಸಿದರೆ ಸುಗಮವಾಗಿ ಆಡಳಿತ ನಡೆಸುವುದು ಕಷ್ಟವೆಂದು ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT