ವೈಎಸ್ ವಿ ದತ್ತ 
ರಾಜಕೀಯ

ಎಪಿಎಂಸಿ ಕಾಯ್ದೆಗೆ ಬೆಂಬಲ: ಜೆಡಿಎಸ್ ನಾಯಕರ ವಿರುದ್ಧ ದತ್ತ ಅಸಮಾಧಾನ

ಯಾವುದೇ ಪಕ್ಷಕ್ಕಾದರೂ ಒಂದು ಸ್ಪಷ್ಟ ನಿಲುವಿರಬೇಕು, ಇಲ್ಲದೇ ಇದ್ದರೇ ನಗೆ ಪಾಟಲಿಗೀಡಾಬೇಕಾಗುತ್ತದೆ, ಆಗ ಪಕ್ಷ ಪಕ್ಷ ದುರ್ಬಲವಾಗುತ್ತದೆ ಎಂದು ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗ: ಯಾವುದೇ ಪಕ್ಷಕ್ಕಾದರೂ ಒಂದು ಸ್ಪಷ್ಟ ನಿಲುವಿರಬೇಕು, ಇಲ್ಲದೇ ಇದ್ದರೇ ನಗೆ ಪಾಟಲಿಗೀಡಾಬೇಕಾಗುತ್ತದೆ, ಆಗ ಪಕ್ಷ ಪಕ್ಷ ದುರ್ಬಲವಾಗುತ್ತದೆ ಎಂದು ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯ್ದೆ, ಎಪಿಎಂಸಿ, ಗೋಹತ್ಯೆ, ಕಾಯ್ದೆ, ವಿಷಯದಲ್ಲಿ ಜೆಡಿಎಸ್ ತೆಗೆದುಕೊಂಡ ನಿರ್ಧಾರ ಸರಿಯಲ್ಲ ಎಂದು ಟೀಕಿಸಿದ್ದಾರೆ.

ಜೆಡಿಎಸ್‌ ಜಾತ್ಯತೀತ ಪಕ್ಷವಾಗಿದ್ದು, ತತ್ವ- ಸಿದ್ಧಾಂತಗಳ ನೆಲೆಗಟ್ಟಿನ ಮೇಲೆ ಜೆಡಿಎಸ್‌ ರೈತರ ಪರ, ಬಡವರ ಪರವಾಗಿದೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಈಗಾಗಲೇ ಇದರ ಬಗ್ಗೆ ವಿಲೀನ ಇಲ್ಲ ಎಂದು ಹೇಳಿದ್ದಾರೆ. ಜೆಡಿಎಸ್‌ನ್ನು ಯಾವುದೇ ಕಾರಣಕ್ಕೂ ಬಿಜೆಪಿಯಲ್ಲಿ ವಿಲೀನಗೊಳಿಸುವುದಿಲ್ಲ ಪುನರುಚ್ಚರಿಸಿದ್ದಾರೆ.

ಜಾತಿ, ಸಮುದಾಯ, ಹಣ ರಾಜಕಾರಣದಲ್ಲಿ ಬೆರೆಯುತ್ತಿದೆ. ಹಾಗಾಗಿ ನಮಗೆ ವಿಧಾನ ಪರಿಷತ್‌ ಸ್ಥಾನ ಕೈ ತಪ್ಪಲು ಕಾರಣ ಇರಬಹುದು. ಜತೆಗೆ ಇದು ಪಕ್ಷದ ತೀರ್ಮಾನ. ಅಲ್ಲಿ ಇಕ್ಕಟ್ಟು, ಬಿಕ್ಕಟ್ಟು ಇರುತ್ತದೆ. ಅದರಿಂದ ನನಗೇನು ಬೇಜಾರಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT