ಮತಗಟ್ಟೆಗಳ ಮುಂದೆ ಮತದಾರರು ನಿಂತಿರುವುದು 
ರಾಜಕೀಯ

ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಪ್ರಗತಿಯಲ್ಲಿ, ಮಧ್ಯಾಹ್ನ 1 ಗಂಟೆ ವೇಳೆಗೆ ಸರಾಸರಿ ಶೇ. 52ರಷ್ಟು ಮತದಾನ 

ರಾಜ್ಯದ 2,709 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಆರು ಗಂಟೆಯಲ್ಲಿ ಸರಾಸರಿ ೫೨ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದ 2,709 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಆರು ಗಂಟೆಯಲ್ಲಿ ಸರಾಸರಿ ೫೨ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ಜಿಲ್ಲೆಯ ಮೂರು ತಾಲೂಕಿನ ೧೦೧ ಗ್ರಾಮ ಪಂಚಾಯತಿಗಳಲ್ಲಿ ಮಧ್ಯಾಹ್ನ ೧ ಗಂಟೆ ವೇಳೆಗೆ ಶೇಕಡವಾರು ೪೨.೬೨ ರಷ್ಟು ಹಕ್ಕು ಚಲಾವಣೆಯಾಗಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮ ಪಂಚಾಯಿತಿ ಮತಗಟ್ಟೆಯೊಂದರಲ್ಲಿ ಅಭ್ಯರ್ಥಿಯ ಚಿಹ್ನೆ ಬದಲಾಗಿದ್ದು, ಅಲ್ಲಿನ ಮತದಾನವನ್ನು ಇದೇ 29ಕ್ಕೆ ಮುಂದೂಡಲಾಗಿದೆ. ಕಲಾದಗಿ ಗ್ರಾಮ ಪಂಚಾಯತ್‌ನ ವಾರ್ಡ್ ನಂ.11ರ ಮತಗಟ್ಟೆ ಸಂಖ್ಯೆ 51ರಲ್ಲಿನ ಬ್ಯಾಲೆಟ್ ಪೇಪರ್ ಗಳಲ್ಲಿ ಈ ಎಡವಟ್ಟು ಕಂಡು ಬಂದಿದ್ದು, ಅಲ್ಲಿನ ಮತದಾನ ಸ್ಥಗಿತಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶಿಸಿದ್ದಾರೆ.

ಗುಲ್ಬರ್ಗ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಲ್ವಾರ್ ಗ್ರಾಮದಲ್ಲಿ ಇಂದು ಮದುವೆಯಾದ ನವ ದಂಪತಿ ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿ ಗಮನ ಸೆಳೆದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇಕಡಾ 46.47ರಷ್ಟು ಮತದಾನವಾಗಿದೆ. ಬಾಗಲಕೋಟೆಯಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇಕಡಾ 55.04ರಷ್ಟು ಮತದಾನವಾಗಿದೆ, ಗದಗ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇಕಡಾ 44.51ರಷ್ಟು, ವಿಜಯಪುರದಲ್ಲಿ ಶೇಕಡಾ 34.53ರಷ್ಟಾಗಿದೆ. 

ಹಲವು ಮತಗಟ್ಟೆಗಳಿಗೆ ಅಶಕ್ತರು, ಅಂಗವಿಕಲರು, ವಯೋವೃದ್ಧರು ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಸಂಜೆ 5ರಿಂದ 6 ಗಂಟೆವರೆಗೆ ಕೋವಿಡ್ ಸೋಂಕಿತರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT