ಮತಗಟ್ಟೆಗಳ ಮುಂದೆ ಮತದಾರರು ನಿಂತಿರುವುದು 
ರಾಜಕೀಯ

ಗ್ರಾಮ ಪಂಚಾಯತ್ ಎರಡನೇ ಹಂತದ ಮತದಾನ ಪ್ರಗತಿಯಲ್ಲಿ, ಮಧ್ಯಾಹ್ನ 1 ಗಂಟೆ ವೇಳೆಗೆ ಸರಾಸರಿ ಶೇ. 52ರಷ್ಟು ಮತದಾನ 

ರಾಜ್ಯದ 2,709 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಆರು ಗಂಟೆಯಲ್ಲಿ ಸರಾಸರಿ ೫೨ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದ 2,709 ಗ್ರಾಮ ಪಂಚಾಯತ್ ಗಳಿಗೆ ಎರಡನೇ ಹಂತದ ಚುನಾವಣೆಗೆ ಮತದಾನ ಪ್ರಗತಿಯಲ್ಲಿದೆ. ಮೊದಲ ಆರು ಗಂಟೆಯಲ್ಲಿ ಸರಾಸರಿ ೫೨ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ಜಿಲ್ಲೆಯ ಮೂರು ತಾಲೂಕಿನ ೧೦೧ ಗ್ರಾಮ ಪಂಚಾಯತಿಗಳಲ್ಲಿ ಮಧ್ಯಾಹ್ನ ೧ ಗಂಟೆ ವೇಳೆಗೆ ಶೇಕಡವಾರು ೪೨.೬೨ ರಷ್ಟು ಹಕ್ಕು ಚಲಾವಣೆಯಾಗಿದೆ ಎಂದು ತಿಳಿದುಬಂದಿದೆ.

ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮ ಪಂಚಾಯಿತಿ ಮತಗಟ್ಟೆಯೊಂದರಲ್ಲಿ ಅಭ್ಯರ್ಥಿಯ ಚಿಹ್ನೆ ಬದಲಾಗಿದ್ದು, ಅಲ್ಲಿನ ಮತದಾನವನ್ನು ಇದೇ 29ಕ್ಕೆ ಮುಂದೂಡಲಾಗಿದೆ. ಕಲಾದಗಿ ಗ್ರಾಮ ಪಂಚಾಯತ್‌ನ ವಾರ್ಡ್ ನಂ.11ರ ಮತಗಟ್ಟೆ ಸಂಖ್ಯೆ 51ರಲ್ಲಿನ ಬ್ಯಾಲೆಟ್ ಪೇಪರ್ ಗಳಲ್ಲಿ ಈ ಎಡವಟ್ಟು ಕಂಡು ಬಂದಿದ್ದು, ಅಲ್ಲಿನ ಮತದಾನ ಸ್ಥಗಿತಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶಿಸಿದ್ದಾರೆ.

ಗುಲ್ಬರ್ಗ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಲ್ವಾರ್ ಗ್ರಾಮದಲ್ಲಿ ಇಂದು ಮದುವೆಯಾದ ನವ ದಂಪತಿ ಕಲ್ಯಾಣ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿ ಗಮನ ಸೆಳೆದರು.

ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇಕಡಾ 46.47ರಷ್ಟು ಮತದಾನವಾಗಿದೆ. ಬಾಗಲಕೋಟೆಯಲ್ಲಿ ಮಧ್ಯಾಹ್ನ 1 ಗಂಟೆ ವೇಳೆಗೆ ಶೇಕಡಾ 55.04ರಷ್ಟು ಮತದಾನವಾಗಿದೆ, ಗದಗ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇಕಡಾ 44.51ರಷ್ಟು, ವಿಜಯಪುರದಲ್ಲಿ ಶೇಕಡಾ 34.53ರಷ್ಟಾಗಿದೆ. 

ಹಲವು ಮತಗಟ್ಟೆಗಳಿಗೆ ಅಶಕ್ತರು, ಅಂಗವಿಕಲರು, ವಯೋವೃದ್ಧರು ಬಂದು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದ್ದು, ಸಂಜೆ 5ರಿಂದ 6 ಗಂಟೆವರೆಗೆ ಕೋವಿಡ್ ಸೋಂಕಿತರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT