ಅಸಾದುದ್ದೀನ್ ಓವೈಸಿ 
ರಾಜಕೀಯ

ಬೆಂಗಳೂರಿನ ಗದ್ದುಗೆ ಮೇಲೆ ಓವೈಸಿ ಕಣ್ಣು: ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಎಂಐಎಂ ತಯಾರಿ!

ಬಿಬಿಎಂಪಿ ಚುನಾವಣೆ ಕುರಿತಂತೆ ಕಾನೂನು ಅಡ್ಡಿಗಳಿರುವ ಈ ಸಮಯದಲ್ಲಿಯೂ ಅಸಾದುದ್ದೀನ್ ಓವೈಸಿ ನೇತೃತ್ವದ  ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಎಂಐಎಂ) ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಳಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಬೆಂಗಳೂರು: ಬಿಬಿಎಂಪಿ ಚುನಾವಣೆ ಕುರಿತಂತೆ ಕಾನೂನು ಅಡ್ಡಿಗಳಿರುವ ಈ ಸಮಯದಲ್ಲಿಯೂ ಅಸಾದುದ್ದೀನ್ ಓವೈಸಿ ನೇತೃತ್ವದ  ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹಾದ್-ಉಲ್-ಮುಸ್ಲೀಮೀನ್ (ಎಐಎಂಐಎಂ) ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಳಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ದೇಶಾದ್ಯಂತ ತನ್ನ ನೆಲೆಯನ್ನು ವಿಸ್ತರಿಸುತ್ತಿರುವ ಪಕ್ಷವು ಚುನಾವಣೆಅಭ್ಯರ್ಥಿಗಳ ಪರವಾಗಿ ಸ್ಕೌಟಿಂಗ್ ಮಾಡುತ್ತಿದೆ ಎನ್ನಲಾಗಿದೆ. ಇದು ಎಲ್ಲಾ 198 ಬಿಬಿಎಂಪಿ ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೂ ಕೆಲವು ವಾರ್ಡ್‌ಗಳಲ್ಲಿ ಬಲವಾದ ನೆಲೆಯನ್ನು ಹೊಂದಿರುವ ಕಾರ್ಯಕರ್ತರನ್ನು ಹುಡುಕುತ್ತಿದೆ ಎಂದು ತಿಳಿದುಬಂದಿದೆ.

ಎಐಎಂಐಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಲತೀಫ್ ಖಾನ್ ಪಠಾಣ್, “ನಾವು ಈ ಹಿಂದೆ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸಿದ್ದೆವು, ಆದರೆ ಸಿದ್ದರಾಮಯ್ಯ ಸರ್ಕಾರವು ವಿವಿಧ ತಂತ್ರಗಳನ್ನು ಬಳಸಿ ನಮ್ಮನ್ನು ತಡೆದಿದೆ. ಅದರ ಹೊರತಾಗಿಯೂ, ಈ ಹಿಂದೆ ನಮ್ಮೊಂದಿಗಿದ್ದ ಎಸ್‌ಡಿಪಿಐ ಅಭ್ಯರ್ಥಿ ಚುನಾವಣೆಯಲ್ಲಿ ಗೆದ್ದರು. ಆದರೆ ಈ ಬಾರಿ ನಾವು ಮೊದಲೇ ತಯಾರಿ ನಡೆಸುತ್ತಿದ್ದೇವೆ. ” ಎಂದಿದ್ದಾರೆ.

ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ತಾವು ವಾರ್ಡ್ ವಾರು ಸಮಿತಿಗಳನ್ನು ರಚಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ. . "ಜನರಿಗೆ ಒಳ್ಳೆಯ ಕೆಲಸ ಮಾಡಿದ ಕಾರ್ಯಕರ್ತರನ್ನು ನಾವು ಬಯಸುತ್ತೇವೆ. ಸಮಿತಿಗಳು ಅಂತಹ ಅಭ್ಯರ್ಥಿಗಳನ್ನು ಗುರುತಿಸುತ್ತವೆ ಮತ್ತು ಪಕ್ಷದ ಮುಖಂಡರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾವು ಯುವಕರಿಗೆ ಟಿಕೆಟ್ ನೀಡಲು ಉತ್ಸುಕರಾಗಿದ್ದೇವೆ, ” ಖಾನ್  ವಿವರಿಸಿದ್ದಾರೆ.

“ಪಕ್ಷವು ಎಲ್ಲಾ ಸ್ಥಾನಗಳಿಗೆ ಸ್ಪರ್ಧಿಸುವುದಿಲ್ಲ. ನಾವು ಪ್ರಾಯೋಗಿಕ ವಿಧಾನವನ್ನು ಹೊಂದಿದ್ದೇವೆ ಮತ್ತು ನಾವು ಚುನಾವಣೆಗೆ ಸ್ಪರ್ಧಿಸಿದೊಡನೆ ಆಡಳಿತ ಪಕ್ಷವಾಗಲು ಸಾಧ್ಯವಿಲ್ಲ ಎಂದು ತಿಳಿದಿದೆ. ನಾವು ಅರ್ಹರಿಗೆ ಮಾತ್ರ ಆದ್ಯತೆ ನೀಡುತ್ತೇವೆ ಮತ್ತು ಹೆಸರಿಲ್ಲದ ಯಾರನ್ನೂ ಕಣಕ್ಕಿಳಿಸುವುದಿಲ್ಲ. ಈ ಬಾರಿ ಪ್ರಣಾಳಿಕೆಯನ್ನು ಹೊರತರುವ ಕುರಿತು ನಾವು ಚರ್ಚೆ ನಡೆಸುತ್ತಿದ್ದೇವೆ” ,ಪಕ್ಷವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ನೆಲೆಯೂರಲು ಸಿದ್ದವಾಗಿದ್ದು ಇದೀಗ ದಕ್ಷಿಣ ಕರ್ನಾಟಕದಲ್ಲಿಯೂ ಸ್ಥಾನ ಗಟ್ಟಿಯಾಗಿಸಿಕೊಳ್ಳಲು ಪಕ್ಷವು ಕಾರ್ಯತತ್ಪರವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!