ಯಡಿಯೂರಪ್ಪ 
ರಾಜಕೀಯ

3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ: ರೈತರ ಪರ ರಾಜ್ಯ ಸರ್ಕಾರ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು' 'ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ' ಎಂದರು.  ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.

ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಶಾಸಕರ ಪರಿಶ್ರಮದಿಂದ ಬಿಜೆಪಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಹಾಗೆಯೇ ಇದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕೃಷಿಪರ ನೀತಿಗಳಿಗೆ ರೈತರ ಬೆಂಬಲ ಇರುವುದಕ್ಕೆ ಸಾಕ್ಷಿಯಾಗಿದ ಎಂದೂ ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ  ನೇತೃತ್ವದಲ್ಲಿ ಎನ್​ಡಿಎ ಸರ್ಕಾರ 2022ರ ವೇಳೆಗೆ ರೈತರ ಆದಾಯವನ್ನ ದ್ವಿಗುಣಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಿದ್ದಾರೆ. ರೈತರ ಶ್ರೇಯೋಭಿವೃದ್ಧಿಗಾಗಿಯೇ ಕೃಷಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ರೈತರು ತಮ್ಮ ಉತ್ಪನ್ನವನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬೇಕೆಂಬ ಬಹುಕಾಲದ ಬೇಡಿಕೆಯನ್ನ ಮೋದಿ ಈಡೇರಿಸಿದ್ಧಾರೆ ಎಂದು ಬಿಎಸ್​ವೈ ಹೇಳಿದರು.

ವಿರೋಧ ಪಕ್ಷಗಳು ನರೇಂದ್ರ ಮೋದಿ ಅವರನ್ನ ಟೀಕೆ ಮಾಡಬಹುದು. ಆದರೆ, ಮೋದಿ ರೂಪಿಸಿರುವ ದೂರದೃಷ್ಟಿ ಕಾರ್ಯಕ್ರಮಗಳನ್ನ ಟೀಕಿಸಲು ಸಾಧ್ಯವಿಲ್ಲ. ಕಿಸಾನ್ ಯೋಜನೆ, ಜಗಜೀವನ್ ಮಿಷನ್ ಯೋಜನೆ, ಮಾಸಿಕ ಪಿಂಚಣಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಮೊದಲಾದ ಯೋಜನೆಗಳು ನಮ್ಮ ಮುಂದಿದೆ. ಪ್ರಧಾನಿ ಮೋದಿ ಅವರ
ದೂರದೃಷ್ಟಿಯ ಈ ಕಾರ್ಯಕ್ರಮಗಳನ್ನ ರೈತರು ಅರ್ಥ ಮಾಡಿಕೊಂಡು ತಮ್ಮ ಪ್ರತಿಭಟನೆಗಳನ್ನ ಕೈಬಿಡಬೇಕು ಎಂದು ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT