ಡಿ.ಕೆ.ಶಿವಕುಮಾರ್ 
ರಾಜಕೀಯ

2021 ಕಾಂಗ್ರೆಸ್ ಗೆ ಹೋರಾಟದ ವರ್ಷ: ಡಿ.ಕೆ. ಶಿವಕುಮಾರ್

ಬರುತ್ತಿರುವ 2021 ಹೊಸ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ. ಮುಂದೆ ಪಕ್ಷ ಅಧಿಕಾರಕ್ಕೆ‌ ತರಲು, ಪಕ್ಷ ಸಂಘಟನಾತ್ಮಕವಾಗಿ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರು: ಬರುತ್ತಿರುವ 2021 ಹೊಸ ವರ್ಷ ಕಾಂಗ್ರೆಸ್ ಕಾರ್ಯಕರ್ತರಿಗೆ ಹೋರಾಟದ ವರ್ಷ. ಮುಂದೆ ಪಕ್ಷ ಅಧಿಕಾರಕ್ಕೆ‌ ತರಲು, ಪಕ್ಷ ಸಂಘಟನಾತ್ಮಕವಾಗಿ ಹೋರಾಟ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇವರು ಇಂತಹದ್ದೇ ಪಕ್ಷದವರು ಎಂದು ಗುರುತಿಸಲು ಸಾಧ್ಯವಿಲ್ಲ. ಆದರೂ ಚುನಾವಣೆಯಲ್ಲಿ ಶೇ.60 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪಟ್ಟಿ ಕೊಡಬಲ್ಲೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಗೆದ್ದಿದ್ದಾರೆ. ಫಲಿತಾಂಶದ ಬಗ್ಗೆ ತಮಗೆ ಸಮಾಧಾನವಿದೆ. ಈ ಬಗ್ಗೆ ಜಿಲ್ಲಾಧ್ಯಕ್ಷರಿಂದ ಸಂಪೂರ್ಣ ವರದಿ ತರಿಸಿಕೊಳ್ಳುವುದಾಗಿ ಹೇಳಿದರು.

ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಯಾರು ಅಧಿಕಾರ ಹಿಡಿಯಲಿದ್ದಾರೆ ಎನ್ನುವುದು‌ ನಿಮಗೆ ಗೊತ್ತಾಗಲಿದೆ ಎಂದು ಮಾರ್ಮಿಕವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಮೀಸಲಾತಿ ಬಳಸಿ ಗ್ರಾಮ ಪಂಚಾಯತಿಗಳನ್ನು ಹಿಡಿಯಲು ಬಿಜೆಪಿ ಮುಂದಾಗಬಹುದು ಎಂದರು.

ಆಡಳಿತದಲ್ಲಿರುವ ಸರ್ಕಾರಗಳು ಉಪಚುನಾವಣೆ ಗೆಲ್ಲುವುದು ಸಹಜ. ಮುಖ್ಯಮಂತ್ರಿ ಯಡಿಯೂರಪ್ಪ ಉಪಚುನಾವಣೆ ಗೆದ್ದಿರುವ ಬಗ್ಗೆ ಹೇಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವಿದ್ದಾಗ ಕಾಂಗ್ರೆಸ್ ಸಹ ಉಪಚುನಾವಣೆ ಗೆದ್ದಿತ್ತು. ಈ ಬಗ್ಗೆ ಪಟ್ಟಿ ಕೊಡಬಲ್ಲೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!