ಸಂಗ್ರಹ ಚಿತ್ರ 
ರಾಜಕೀಯ

ಸಚಿವಾಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ಹರಸಾಹಸ; ಬಿಕ್ಕಟ್ಟು ಮುಂದುವರಿಕೆ

ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದ ಖುಷಿಯಲ್ಲಿದ್ದರೆ, ಮತ್ತೊಂಡೆಗೆ ಸಚಿವಾಕಾಂಕ್ಷಿಗಳಿಂದ ಹೆಚ್ಚುತ್ತಿರುವ ಒತ್ತಡದಿಂದ ಯಡಿಯೂರಪ್ಪ ಕಂಗಾಲಾಗಿದ್ದಾರೆ. ಇದನ್ನು ನಿಭಾಯಿಸಲು ಮುಖ್ಯಮಂತ್ರಿ ಹರಸಾಹಸ ಪಡುತ್ತಿದ್ದಾರೆ.

ಬೆಂಗಳೂರು: ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದ ಖುಷಿಯಲ್ಲಿದ್ದರೆ, ಮತ್ತೊಂಡೆಗೆ ಸಚಿವಾಕಾಂಕ್ಷಿಗಳಿಂದ ಹೆಚ್ಚುತ್ತಿರುವ ಒತ್ತಡದಿಂದ ಯಡಿಯೂರಪ್ಪ ಕಂಗಾಲಾಗಿದ್ದಾರೆ. ಇದನ್ನು ನಿಭಾಯಿಸಲು ಮುಖ್ಯಮಂತ್ರಿ ಹರಸಾಹಸ ಪಡುತ್ತಿದ್ದಾರೆ.

ಆಪ್ತ ಶಾಸಕರು ಸೇರಿದಂತೆ ಪಕ್ಷದಲ್ಲಿ ಹಿರಿಯರು ಹಾಗೂ ನೂತನ ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ನಿನ್ನೆ ಇಡೀ ದಿನ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ನೆಪದಲ್ಲಿ ಉಳಿದುಕೊಂಡಿದ್ದು, ಅಲ್ಲಿಂದಲೇ ಕೆಲವು ಸಚಿವಾಕಾಂಕ್ಷಿಗಳಿಗೆ ದೂರವಾಣಿ ಕರೆ ಮಾಡಿ ಸಮಾಧಾನ ಪಡಿಸುವ ಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಮೂಲ ಬಿಜೆಪಿ ಶಾಸಕರ ಪೈಕಿ ಹಿರಿಯರಾದ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ ಮತ್ತು ಸಿ.ಪಿ.ಯೋಗೆಶ್ವರ್ ಮತ್ತು ಮತ್ತೋರ್ವರಿಗೆ ಸಚಿವ ಸ್ಥಾನ ನಿಗದಿಯಾಗಿದೆ. ಇದನ್ನು ಅರಿತಿರುವ ಮೂಲ ಬಿಜೆಪಿಯ ಸಚಿವಾಕಾಂಕ್ಷಿಗಳು ತೀವ್ರ ಅಸಮಾಧಾನಗೊಂಡಿದ್ದಾರೆ. ಆದ್ದರಿಂದ ನಿನ್ನೆ ಇಡೀ ದಿನ ಅವರನ್ನು ಮುಖ್ಯಮಂತ್ರಿ ಸಮಾಧಾನ ಪಡಿಸುವ ತಂತ್ರ ಮಾಡಿದ್ದಾರೆ. ಒಂದು ವೇಳೆ ಅವರು ಮುಖ್ಯಮಂತ್ರಿಯ ಸೂತ್ರಕ್ಕೆ ಒಪ್ಪಿದರೆ ನಾಳೆಯೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಬಿಕ್ಕಟ್ಟು ಮುಂದುವರಿದರೆ ಇನ್ನೂ ಒಂದು ವಾರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT