ಸಂಗ್ರಹ ಚಿತ್ರ 
ರಾಜಕೀಯ

ಸಚಿವಾಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಯಡಿಯೂರಪ್ಪ ಹರಸಾಹಸ; ಬಿಕ್ಕಟ್ಟು ಮುಂದುವರಿಕೆ

ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದ ಖುಷಿಯಲ್ಲಿದ್ದರೆ, ಮತ್ತೊಂಡೆಗೆ ಸಚಿವಾಕಾಂಕ್ಷಿಗಳಿಂದ ಹೆಚ್ಚುತ್ತಿರುವ ಒತ್ತಡದಿಂದ ಯಡಿಯೂರಪ್ಪ ಕಂಗಾಲಾಗಿದ್ದಾರೆ. ಇದನ್ನು ನಿಭಾಯಿಸಲು ಮುಖ್ಯಮಂತ್ರಿ ಹರಸಾಹಸ ಪಡುತ್ತಿದ್ದಾರೆ.

ಬೆಂಗಳೂರು: ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದ ಖುಷಿಯಲ್ಲಿದ್ದರೆ, ಮತ್ತೊಂಡೆಗೆ ಸಚಿವಾಕಾಂಕ್ಷಿಗಳಿಂದ ಹೆಚ್ಚುತ್ತಿರುವ ಒತ್ತಡದಿಂದ ಯಡಿಯೂರಪ್ಪ ಕಂಗಾಲಾಗಿದ್ದಾರೆ. ಇದನ್ನು ನಿಭಾಯಿಸಲು ಮುಖ್ಯಮಂತ್ರಿ ಹರಸಾಹಸ ಪಡುತ್ತಿದ್ದಾರೆ.

ಆಪ್ತ ಶಾಸಕರು ಸೇರಿದಂತೆ ಪಕ್ಷದಲ್ಲಿ ಹಿರಿಯರು ಹಾಗೂ ನೂತನ ಶಾಸಕರು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ನಿನ್ನೆ ಇಡೀ ದಿನ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ನೆಪದಲ್ಲಿ ಉಳಿದುಕೊಂಡಿದ್ದು, ಅಲ್ಲಿಂದಲೇ ಕೆಲವು ಸಚಿವಾಕಾಂಕ್ಷಿಗಳಿಗೆ ದೂರವಾಣಿ ಕರೆ ಮಾಡಿ ಸಮಾಧಾನ ಪಡಿಸುವ ಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಮೂಲ ಬಿಜೆಪಿ ಶಾಸಕರ ಪೈಕಿ ಹಿರಿಯರಾದ ಉಮೇಶ್ ಕತ್ತಿ, ಅರವಿಂದ್ ಲಿಂಬಾವಳಿ ಮತ್ತು ಸಿ.ಪಿ.ಯೋಗೆಶ್ವರ್ ಮತ್ತು ಮತ್ತೋರ್ವರಿಗೆ ಸಚಿವ ಸ್ಥಾನ ನಿಗದಿಯಾಗಿದೆ. ಇದನ್ನು ಅರಿತಿರುವ ಮೂಲ ಬಿಜೆಪಿಯ ಸಚಿವಾಕಾಂಕ್ಷಿಗಳು ತೀವ್ರ ಅಸಮಾಧಾನಗೊಂಡಿದ್ದಾರೆ. ಆದ್ದರಿಂದ ನಿನ್ನೆ ಇಡೀ ದಿನ ಅವರನ್ನು ಮುಖ್ಯಮಂತ್ರಿ ಸಮಾಧಾನ ಪಡಿಸುವ ತಂತ್ರ ಮಾಡಿದ್ದಾರೆ. ಒಂದು ವೇಳೆ ಅವರು ಮುಖ್ಯಮಂತ್ರಿಯ ಸೂತ್ರಕ್ಕೆ ಒಪ್ಪಿದರೆ ನಾಳೆಯೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಬಿಕ್ಕಟ್ಟು ಮುಂದುವರಿದರೆ ಇನ್ನೂ ಒಂದು ವಾರ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT