ಮಹೇಶ್ ಕುಮಟಳ್ಳಿ 
ರಾಜಕೀಯ

ಆದೇಶ ಸಿಕ್ಕಿದ್ದೇ ಆದರೆ ಪಕ್ಷದ ಕಚೇರಿ ಗುಡಿಸಲು ಸಿದ್ಧ: ಶಾಸಕ ಮಹೇಶ್ ಕುಮಟಳ್ಳಿ

ಚುನಾವಣೆಯಲ್ಲಿ ಗೆಲುವು ಸಾಧಿಸಿದ 11 ಶಾಸಕರ ಪೈಕಿ 10 ಮಂದಿಗೆ ಸಚಿವ ಸ್ಥಾನ ನೀಡುವುದಾಕಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದು, ರಮೇಶ್ ಜಾರಕಿಹೊಳಿ ಆಪ್ತ ಮಹೇಶ್ ಕುಮಟಳ್ಳಿಯವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಅನುಮಾನವಾಗಿದೆ. ಇದರಿಂದ ಸಹಜವಾಗಿಯೇ ಕುಮಟಳ್ಳಿಯವರು ಬೇಸರಗೊಂಡಿದ್ದಾರೆ. 

ಬೆಂಗಳೂರು: ಚುನಾವಣೆಯಲ್ಲಿ ಗೆಲುವು ಸಾಧಿಸಿದ 11 ಶಾಸಕರ ಪೈಕಿ 10 ಮಂದಿಗೆ ಸಚಿವ ಸ್ಥಾನ ನೀಡುವುದಾಕಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದು, ರಮೇಶ್ ಜಾರಕಿಹೊಳಿ ಆಪ್ತ ಮಹೇಶ್ ಕುಮಟಳ್ಳಿಯವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಅನುಮಾನವಾಗಿದೆ. ಇದರಿಂದ ಸಹಜವಾಗಿಯೇ ಕುಮಟಳ್ಳಿಯವರು ಬೇಸರಗೊಂಡಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಟಳ್ಳಿಯವರು, ಎಲ್ಲರೂ ಬನ್ನಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇಂದಿನ ವಾತಾವರಣ ಇದಕ್ಕೆ ವ್ಯತಿರಿಕ್ತವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಮೇಶ್ ಜಾರಕಿಹೊಳಿಯವರೊಂದಿಗೆ ವಿಶ್ವಾಸವನ್ನಿಟ್ಟು ಬಂದಿದ್ದೇನೆ. ಪರಿಸ್ಥಿತಿಯಿಂದ ಇಂದು ಮನಸ್ಸಿಗೆ ನೋವಾಗಿದೆ ಎಂದು ಹೇಳಿದ್ದಾರೆ. 

ಬಿಜೆಪಿ ಪಕ್ಷದ ಹಲವು ಹಿರಿಯ ನಾಯಕರು ಹಾಗೂ ಶಾಸಕರು ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ತಿಳಿಸಿದ್ದರು. ಈ ವೇಳೆ ನಾನೇನನ್ನೂ ಕೇಳಿರಲಿಲ್ಲ. ಆದರೂ, ಸಾಕಷ್ಟು ಭರವಸೆಗಳನ್ನು  ನೀಡಿದ್ದರು. ಇದೀಗ ಪರಿಸ್ಥಿತಿ ಬದಲಾಗಿದೆ. ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ತ್ಯಾಗವನ್ನು ಮಾಡಿದ್ದೇವೆ. ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ಅವರನ್ನು ನಂಬಿ ನಾವು ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವ. ಈಗಲೂ ತ್ಯಾಗ ಮಾಡಲು ನಾನು ಸಿದ್ಧನಿದ್ದೇನೆ. ನನ್ನನ್ನು ಸಚಿವನಾಗಿ ಮಾಡಲು ಸಾಧ್ಯವಿಲ್ಲದೇ ಹೋದರೆ, ವಿಶ್ವನಾಥ್ ಅವರನ್ನಾದರೂ ಸಚಿವರನ್ನಾಗಿ ಮಾಡಲಿ. ಪಕ್ಷ ಆದೇಶಿಸಿದ್ದೇ ಆದರೆ, ಕಚೇರಿಯನ್ನು ಗುಡಿಸಲು ನಾನು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT