ಸಂಪುಟ ಸೇರಿದ 10 ಶಾಸಕರು 
ರಾಜಕೀಯ

10 ವಲಸಿಗ ಶಾಸಕರ ಪ್ರಮಾಣ ವಚನ: ಮೂಲ ಬಿಜೆಪಿಗರಿಗೆ ಇಲ್ಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. 

ಬೆಂಗಳೂರು: ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. 

ಕಾಂಗ್ರೆಸ್‌–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗುತ್ತಿದ್ದಾರೆ. 

ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು

. ರಾಜ್ಯಪಾಲ ವಜುಭಾಯ್‌ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಮೊದಲಿಗೆ ಶಾಸಕ ಎಸ್ ಟಿ ಸೋಮಶೇಖರ್ ದೇವರ ಹೆಸರಿನಿಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ನಂತರ, ರಮೇಶ್ ಜಾರಕಿಹೊಳಿ,  ಆನಂದ್ ಸಿಂಗ್, ಕೆ.ಸುಧಾಕರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್ ಬಿ.ಸಿ ಪಾಟೀಲ್. ಕೆ.ಗೋಪಾಲಯ್ಯ. ನಾರಾಯಣಗೌಡ ಮತ್ತು ಶ್ರೀಮಂತ್ ಪಾಟೀಲ್ ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೂತನ ಶಾಸಕರ ಪ್ರಮಾಣ ವಚನ ಸಮಾರಂಭದಲ್ಲಿ  ಬಿ.ಎಸ್ ಯಡಿಯೂರಪ್ಪ ಸರ್ಕಾರದ ಹಲವು ಸಂಪುಟ ಸಚಿವರು ಭಾಗಿಯಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT