ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಬಿಎಸ್‌ವೈಗೆ ಸರ್ಕಾರ ರಚಿಸುವ, ಬೀಳಿಸುವ ಕಲೆ ಚೆನ್ನಾಗಿ ಗೊತ್ತಿದೆ: ಕುಮಾರಸ್ವಾಮಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸುವ ಮತ್ತು ಸರ್ಕಾರ ರಚಿಸುವ ಕಲೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸುವ ಮತ್ತು ಸರ್ಕಾರ ರಚಿಸುವ ಕಲೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇಂದು ಎಚ್.ಡಿ.ಕೋಟೆಯ ಕಂಚಮಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಯಡಿಯೂರಪ್ಪ ಅವರು ಈ ಹಿಂದೆ ಏನೆಲ್ಲಾ ಮಾಡಿದ್ದರು, ಹೇಗೆ ಸರ್ಕಾರ ರಚಿಸಿದ್ದರು ಎಂಬುದನ್ನು ಜನ ನೋಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹೇಳುತ್ತೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ಯಡಿಯೂರಪ್ಪ ಅವರು ಬೆಳಗ್ಗೆ ಒಂದು ತೀರ್ಮಾನ, ಮಧ್ಯಾಹ್ನ ಮತ್ತೊಂದು ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಹಿಂದೆ ಅವರು 105 ಜನ ಬಿಜೆಪಿ ಶಾಸಕರು ಕಡುಬು ತಿಂದುಕೊಂಡು ಕೂತಿರುತ್ತಾರಾ? ಎಂದು ಯಡಿಯೂರಪ್ಪ ಕೇಳಿದ್ದರು. ಮುಂದೆ ಯಾರನ್ನು ಹೊಗಳುತ್ತಾರೆ ಕಾದು ನೋಡಿ, 10 ಜನ ಪ್ರಮಾಣ ವಚನ ಸ್ವೀಕಾರ ಮಾಡಿದರೂ ಹೊಗಳುತ್ತಾರೋ ಬಯ್ಯುತ್ತಾರೋ ನೋಡಿ ಎಂದರು.

ಈಗ 10 ಜನ ಸಚಿವರಾಗಿದ್ದಾರೆ. ಉಳಿದವರು ಸುಮ್ಮನೆ ಇರುತ್ತಾರಾ? ಎಂದು ಪ್ರಶ್ನಿಸಿದ ಅವರು, ಕೋಡಿ ಮಠದ ಸ್ವಾಮೀಜಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಈ ಗ ಸಮಸ್ಯೆ ಇಲ್ಲ, ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ಭವಿಷ್ಯ ಹೇಳಲು ನಾನು ಜ್ಯೋತಿಷಿ ಅಲ್ಲ ಎಂದು ಕಂಚಮಳ್ಳಿಯಲ್ಲಿ ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT