ಶಾಸಕ ಉಮೇಶ್ ಕತ್ತಿ 
ರಾಜಕೀಯ

ಕತ್ತಿ ವರಸೆಗೆ ಯಡಿಯೂರಪ್ಪ ಸುಸ್ತು: ಮನವೊಲಿಕೆ ಜವಾಬ್ದಾರಿ ಸವದಿಗೆ ವಹಿಸಿದ ಸಿಎಂ

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಉಮೇಶ್ ಕತ್ತಿ ನಿನ್ನೆ ಸಂಜೆಯಿಂದ ಬಿಜೆಪಿ ನಾಯಕರ ಕೈಗೆ ಸಿಕ್ಕದೆ ದೂರ ಉಳಿದಿದ್ದು,ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗುವ ಮೂಲಕ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ

ಬೆಂಗಳೂರು: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಉಮೇಶ್ ಕತ್ತಿ ನಿನ್ನೆ ಸಂಜೆಯಿಂದ ಬಿಜೆಪಿ ನಾಯಕರ ಕೈಗೆ ಸಿಕ್ಕದೆ ದೂರ ಉಳಿದಿದ್ದು,ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗುವ ಮೂಲಕ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದಾರೆ

ರಾಜಭವನಕ್ಕೆ ಕಳುಹಿಸಿದ್ದ ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎನ್ನುವುದು ತಿಳಿಯುತ್ತಿದ್ದಂತೆ ಆಕ್ರೋಶಗೊಂಡು ಸಿಎಂ ನಿವಾಸದಿಂದ ನಿರ್ಗಮಿಸಿದ ಕತ್ತಿ ನಂತರ ಸಿಎಂ‌ ಸೇರಿದಂತೆ ಯಾವ ಬಿಜೆಪಿ ನಾಯಕರ ಕೈಗೂ ಸಿಗದೇ ದೂರ ಉಳಿದಿದ್ದಾರೆ

ರಾತ್ರಿಯೇ ಸಿಎಂ‌ ಸೂಚನೆಯಂತೆ ಉಮೇಶ್ ಕತ್ತಿ ಅವರನ್ನು ಹುಡುಕಿ ಕೊಂಡು  ಡಿಸಿಎಂ ಗೋವಿಂದ ಕಾರಜೋಳ ಹಾಗು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೋದರೂ ಕತ್ತಿ ಕೈಗೆ ಸಿಗಲಿಲ್ಲ,ಇಂದು ಬೆಳಗ್ಗೆಯೂ ಮತ್ತೊಮ್ಮೆ ಕತ್ತಿ ಸಂಪರ್ಕ ಮಾಡಲು ಯತ್ನಿಸಿದರೂ ಸಾಧ್ಯವಾಗದೆ ಕಾರಜೋಳ ಹಾಗು ಬೊಮ್ಮಾಯಿ ಸಿಎಂ ನಿವಾಸಕ್ಕೆ ಆಗಮಿಸಿ ಮಾಹಿತಿ ನೀಡಿದರು.

ನಂತರ ಸಿಎಂ ಕೂಡ ದೂರವಾಣಿ ಮೂಲಕ ಸಂಪರ್ಕ ಮಾಡಲು ಯತ್ನಿಸಿದರೂ ಸಾಧ್ಯವಾಗ ಲಿಲ್ಲ ಕಡೆಗೆ ಬೇಸರದಲ್ಲೇ ಸಿಎಂ ರಾಜಭವನಕ್ಕೆ ತೆರಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT