ಯೋಗೇಶ್ವರ್ 
ರಾಜಕೀಯ

ಯೋಗೇಶ್ವರ್'ಗೆ ಕೈತಪ್ಪಿದ ಸಚಿವ ಸ್ಥಾನ: ಸಂಭ್ರಮಕ್ಕೆ ಸಜ್ಜಾಗಿದ್ದ ಬೆಂಬಲಿಗರಿಗೆ ತೀವ್ರ ಬೇಸರ

ಸಿ.ಪಿ.ಯೋಗೇಶ್ವರ್ ಅವರು ಮಂತ್ರಿಯಾಗಿಯೇ ಆಗುತ್ತಾರೆಂದು ನಂಬಿಕೊಂಡು ಸಂಪುಟ ವಿಸ್ತರಣೆಗೂ ಮುನ್ನವೇ ನೂತನ ಸಚಿವರಿಗೆ ಅಭಿನಂದನೆಗಳು ಎಂದು ಹೇಳಿ ಬ್ಯಾನರ್ ಗಳನ್ನು ಹಾಕಿದ್ದ ಬೆಂಬಲಿಗರಿಗೆ, ಸಚಿವ ಸಂಪುಟ ವಿಸ್ತರಣೆ ಬಳಿಕ ತೀವ್ರ ನಿರಾಸೆಯಾಗಿದೆ.

ಮೈಸೂರು: ಸಿ.ಪಿ.ಯೋಗೇಶ್ವರ್ ಅವರು ಮಂತ್ರಿಯಾಗಿಯೇ ಆಗುತ್ತಾರೆಂದು ನಂಬಿಕೊಂಡು ಸಂಪುಟ ವಿಸ್ತರಣೆಗೂ ಮುನ್ನವೇ ನೂತನ ಸಚಿವರಿಗೆ ಅಭಿನಂದನೆಗಳು ಎಂದು ಹೇಳಿ ಬ್ಯಾನರ್ ಗಳನ್ನು ಹಾಕಿದ್ದ ಬೆಂಬಲಿಗರಿಗೆ, ಸಚಿವ ಸಂಪುಟ ವಿಸ್ತರಣೆ ಬಳಿಕ ತೀವ್ರ ನಿರಾಸೆಯಾಗಿದೆ. 

ಈ ಹಿಂದೆ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಪಕ್ಕಾ ಎಂದು ಹೇಳಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಅವರ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆಗೆ ಸಜ್ಜಾಗಿದ್ದರು. ನೂತನ ಸಚಿವರಿಗೆ ಅಭಿನಂತನೆ ಕೋರುವ ಬ್ಯಾನರ್ ಗಳನ್ನು ರಸ್ತೆಗಳಲ್ಲಿ ಹಾಕಿದ್ದರು. ರಾಮನಗರ, ಚನ್ನಪಟ್ಟಣದಲ್ಲಿ ಈ ಬ್ಯಾನರ್ ಗಳು ರಾರಾಜಿಸುತ್ತಿದ್ದವು. ಆದರೆ ಕೊನೆ ಕ್ಷಣದಲ್ಲಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಇದರಿಂತೆ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಯೋಗೇಶ್ವರ್ ಅವರು ಸಚಿವರಾದರೆ, ಚೆನ್ನಪಟ್ಟಣ ಹಾಗೂ ರಾಮನಗರ ಹೆದ್ದಾರಿಯನ್ನು ಬಂದ್ ಮಾಡಿ, ಸ್ಥಲದಲ್ಲಿ ದೊಡ್ಡ ಮಟ್ಟದಲ್ಲಿ ಸಂಭ್ರಮವಾಚರಿಸಲು ಬೆಂಬಲಿಗರು ಸಜ್ಜಾಗಿದ್ದರು. ಈ ಮೂಲಕ ಕುಮಾರಸ್ವಾಮಿ ಹಾಗೂ ಡಿಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಲು ಮುಂದಾಗಿದ್ದರು. 

ಯೋಗೇಶ್ವರ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ಯಡಿಯೂರಪ್ಪ ನಿರ್ಧರಿಸಿದ್ದರು. ಆದರೆ, ಇದಕ್ಕೆ ಶಾಸಕ ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಯೋಗೇಶ್ವರ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲು ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಕೂಡ ಬೆಂಬಲ ವ್ಯಕ್ತಪಡಿಸಿದ್ದರು. ಇದಕ್ಕೂ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT