ದೇವೇಗೌಡ 
ರಾಜಕೀಯ

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು  ಮುರಿಯಬೇಕು: ದೇವೇಗೌಡ

ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಸನ: ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಾರತವು ಜಾತ್ಯತೀತ, ಬಹುಭಾಷಾ ದೇಶ ಎಂಬುದನ್ನು ಗೃಹ ಸಚಿವರು ಮರೆತಿದ್ದಾರೆ.“ಷಾ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ. ರಾಷ್ಟ್ರದ ಶಾಂತಿ, ಸರ್ವಾಂಗೀಣ ಅಭಿವೃದ್ಧಿಯ ಹಿತದೃಷ್ಟಿಯಿಂದ ಜನರು ಮುಂದೆ ಬಂದು ಕಾಯ್ದೆಗಳನ್ನು ವಿರೋಧಿಸಬೇಕು ”ಎಂದು ಮಾಜಿ ಪ್ರಧಾನಿ, ಹೇಳಿದ್ದಾರೆ. ಜಾತ್ಯತೀತ ಮುಖಂಡರು ಒಗ್ಗಟ್ಟಾಗಿ  ಕೇಂದ್ರವು ಮಂಡಿಸಿರುವ ಪ್ರಜಾಪ್ರಭುತ್ವ ವಿರೋಧಿ ನೀತಿಗಳ ವಿರುದ್ಧ ಹೋರಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

"ಜಾತ್ಯತೀತ ಶಕ್ತಿಗಳುಬೀದಿಗಿಳಿಯುವ ಮೂಲಕ ಮಾತ್ರವೇ ಅಲ್ಪಸಂಖ್ಯಾತರನ್ನು ರಕ್ಷಿಸಬಹುದು" ಎಂದು ಅವರು ಹೇಳಿದರು. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗಳ ಸುತ್ತಲಿನ ವಿವಾದದ ಬಗ್ಗೆ ಮಾತನಾಡಿದ ಗೌಡ, ಬಿಜೆಪಿ ನಾಯಕರು ರಾಷ್ಟ್ರ ವಿರೋಧಿ ಟೀಕೆಗಳನ್ನು ಪ್ರಸಾರ ಮಾಡುತ್ತಿದ್ದಾರೆ, ಇದು ಶಾಂತಿಗೆ ಭಂಗ ತರುತ್ತದೆ. "ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಹಿಂದೂಗಳು ಬಿಜೆಪಿಯ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಹೋರಾಡಲು ಒಂದಾಗಬೇಕು."ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ