ದೇವೇಗೌಡ 
ರಾಜಕೀಯ

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು  ಮುರಿಯಬೇಕು: ದೇವೇಗೌಡ

ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಹಾಸನ: ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಾರತವು ಜಾತ್ಯತೀತ, ಬಹುಭಾಷಾ ದೇಶ ಎಂಬುದನ್ನು ಗೃಹ ಸಚಿವರು ಮರೆತಿದ್ದಾರೆ.“ಷಾ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಿಲ್ಲ. ರಾಷ್ಟ್ರದ ಶಾಂತಿ, ಸರ್ವಾಂಗೀಣ ಅಭಿವೃದ್ಧಿಯ ಹಿತದೃಷ್ಟಿಯಿಂದ ಜನರು ಮುಂದೆ ಬಂದು ಕಾಯ್ದೆಗಳನ್ನು ವಿರೋಧಿಸಬೇಕು ”ಎಂದು ಮಾಜಿ ಪ್ರಧಾನಿ, ಹೇಳಿದ್ದಾರೆ. ಜಾತ್ಯತೀತ ಮುಖಂಡರು ಒಗ್ಗಟ್ಟಾಗಿ  ಕೇಂದ್ರವು ಮಂಡಿಸಿರುವ ಪ್ರಜಾಪ್ರಭುತ್ವ ವಿರೋಧಿ ನೀತಿಗಳ ವಿರುದ್ಧ ಹೋರಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.

"ಜಾತ್ಯತೀತ ಶಕ್ತಿಗಳುಬೀದಿಗಿಳಿಯುವ ಮೂಲಕ ಮಾತ್ರವೇ ಅಲ್ಪಸಂಖ್ಯಾತರನ್ನು ರಕ್ಷಿಸಬಹುದು" ಎಂದು ಅವರು ಹೇಳಿದರು. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆಗಳ ಸುತ್ತಲಿನ ವಿವಾದದ ಬಗ್ಗೆ ಮಾತನಾಡಿದ ಗೌಡ, ಬಿಜೆಪಿ ನಾಯಕರು ರಾಷ್ಟ್ರ ವಿರೋಧಿ ಟೀಕೆಗಳನ್ನು ಪ್ರಸಾರ ಮಾಡುತ್ತಿದ್ದಾರೆ, ಇದು ಶಾಂತಿಗೆ ಭಂಗ ತರುತ್ತದೆ. "ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಹಿಂದೂಗಳು ಬಿಜೆಪಿಯ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಹೋರಾಡಲು ಒಂದಾಗಬೇಕು."ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT