ಮಹೇಶ್ ಕುಮಟಳ್ಳಿ 
ರಾಜಕೀಯ

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಮಹೇಶ್ ಕುಮಟಳ್ಳಿಗೆ ಎಂಎಸ್ಐಎಲ್ ಅಧ್ಯಕ್ಷ ಸ್ಥಾನ!

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಮಹೇಶ್ ಕುಮಟಳ್ಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಹತ್ವದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್(ಎಂಎಸ್ಐಎಲ್) ಅಧ್ಯಕ್ಷ ಸ್ಥಾನ ನೀಡಿದ್ದಾರೆ.

ಬೆಂಗಳೂರು: ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿದ್ದ ಮಹೇಶ್ ಕುಮಟಳ್ಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಮಹತ್ವದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್(ಎಂಎಸ್ಐಎಲ್) ಅಧ್ಯಕ್ಷ ಸ್ಥಾನ ನೀಡಿದ್ದಾರೆ.

ಸಚಿವ ಸಂಪುಟ ವಿಸ್ತಾರಣೆಯಲ್ಲಿ ಉಪ ಚುನಾವಣೆಯಲ್ಲಿ ಗೆದ್ದಿರುವ ಅರ್ಹರಲ್ಲಿ ಕುಮಟಳ್ಳಿ ಅವರಿಗೆ ಮಾತ್ರ ಸಚಿವ ಸ್ಥಾನ ನೀಡಿರಲಿಲ್ಲ. ಬೆಳಗಾವಿ ಜಿಲ್ಲೆಯ ಪ್ರಾತಿನಿಧ್ಯ ಹೆಚ್ಚಾಗುವ ಕಾರಣ ಕುಮಟಳ್ಳಿ ಅರವನ್ನು ಸಚಿವ ಸ್ಥಾನಕ್ಕೆ ಪರಿಗಣಿಸಿರಲಿಲ್ಲ. 

ಇಂದು ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಮಹೇಶ್ ಕುಮಟಳ್ಳಿ ಅವರಿಗೆ ನಿಗಮ ಮಂಡಳಿಯಲ್ಲಿ ಪ್ರಮುಖ ಹುದ್ದೆಯನ್ನು ಬಿಎಸ್ ಯಡಿಯೂರಪ್ಪ ಅವರು ನೀಡಿ ಈ ಮೂಲಕ ಕುಮಟಳ್ಳಿ ಅವರ ಅಸಮಾಧಾನ ಶಮನ ಮಾಡುವ ಪ್ರಯತ್ನವನ್ನು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

SCROLL FOR NEXT