ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 
ರಾಜಕೀಯ

ಆರ್ಥಿಕ ತೊಂದರೆ ಇರುವುದು ನಿಜ, ಸಿದ್ದರಾಮಯ್ಯ ಹೇಳುವಷ್ಟು ತೊಂದರೆ ಇಲ್ಲ: ಕಾರಜೋಳ

ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

ಬಾಗಲಕೋಟೆ: ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದರಿದ್ರತನ ಆರಂಭಗೊcಡಿದ್ದೇ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಎಂದು ಆರೋಪಿಸಿದರು.

ಹೊಸ ಸಾಲ ತೆಗೆಯಲು ಬಾರದಷ್ಟು ಸಾಲ ತೆಗೆದಿದ್ದಾರೆ. ಪ್ರಕೃತಿ ವಿಕೋಪ ಉಂಟಾಗಿ ಆರ್ಥಿಕ ತೊಂದರೆ ಆಗಿದೆ. ಸುಮಾರು ೩೮ ಸಾವಿರ ಕೋಟಿ ರೂ. ನೆರೆ ಪರಿಹಾರಕ್ಕೆ ಖರ್ಚು ಮಾಡಲಾಗುತ್ತಿದೆ. ಪರಿಹಾರ ಹಂಚಿಕೆ, ರಸ್ತೆ, ಮನೆಗಳ ನಿರ್ಮಾಣಕ್ಕೆ ವೆಚ್ಚ ಮಾಡಲಾಗಿದೆ. ಹಾಗಾಗಿ ತೊಂದರೆ ಕಾಣಿಸಿಕೊಂಡಿದೆ ಎಂದರು.

ದೇಹಲಿ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು ಎಪಿಪಿ ನೀಡಿರುವ ಜನಪ್ರೀಯ ಯೋಜನೆಗಳು ಆ ಪಕ್ಷದ ಗೆಲುವಿಗೆ ಕಾರಣವಾಗಿದೆ. ದೇಶದ ವಿಷಯ ಬಂದಾಗ ದೇಶದ ಅಖಂಡತೆ, ರಾಷ್ಟಿçÃಯತೆ ವಿಷಯ ಬಂದಾಗ ಅದೇ ಜನ ಬಿಜೆಪಿ ಬೆಂಬಲಿಸಿದ್ದಾರೆ. ಪ್ರಾದೇಶಿಕ ಪಕ್ಷಗಳು ಜನಪ್ರೀಯ ಯೋಜನೆಗಳು ಘೋಷಣೆ ಮಾಡಿರುವ ಪರಿಣಾಮ ಅವುಗಳ ಅಧಿಕಾರಕ್ಕೆ ಬರಲು ಸಹಾಯವಾಗುತ್ತಿದೆ ಎಂದು ಹೇಳಿದರು.

ಆಕ್ರಮ ಮರಳು ಗಣಿಗಾರಿಕೆ ಯಾರು ಮಾಡುತ್ತಿದ್ದಾರೆ ಎನ್ನುವುದರ ಮೇಲೆ ನಿಗಾ ಇಡಲಾಗಿದೆ. ಜನತೆಗೆ ಮರಳು ಸುಲಭವಾಗಿ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video

ನಿತೀಶ್ ಕುಮಾರ್ ರಾಜೀನಾಮೆ ನಂತರ ಪಕ್ಷದ ಹೆಸರು ಬದಲಾವಣೆಗೆ ಮುಂದಾದ JDU; ಇಲ್ಲಿದೆ ಕಾರಣ...

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video