ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 
ರಾಜಕೀಯ

ಆರ್ಥಿಕ ತೊಂದರೆ ಇರುವುದು ನಿಜ, ಸಿದ್ದರಾಮಯ್ಯ ಹೇಳುವಷ್ಟು ತೊಂದರೆ ಇಲ್ಲ: ಕಾರಜೋಳ

ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

ಬಾಗಲಕೋಟೆ: ರಾಜ್ಯದಲ್ಲಿ ಆರ್ಥಿಕ ತೊಂದರೆ ಇರುವುದು ನಿಜವಾಗಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿರುವ ತೊಂದರೆ ಇಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದರಿದ್ರತನ ಆರಂಭಗೊcಡಿದ್ದೇ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಎಂದು ಆರೋಪಿಸಿದರು.

ಹೊಸ ಸಾಲ ತೆಗೆಯಲು ಬಾರದಷ್ಟು ಸಾಲ ತೆಗೆದಿದ್ದಾರೆ. ಪ್ರಕೃತಿ ವಿಕೋಪ ಉಂಟಾಗಿ ಆರ್ಥಿಕ ತೊಂದರೆ ಆಗಿದೆ. ಸುಮಾರು ೩೮ ಸಾವಿರ ಕೋಟಿ ರೂ. ನೆರೆ ಪರಿಹಾರಕ್ಕೆ ಖರ್ಚು ಮಾಡಲಾಗುತ್ತಿದೆ. ಪರಿಹಾರ ಹಂಚಿಕೆ, ರಸ್ತೆ, ಮನೆಗಳ ನಿರ್ಮಾಣಕ್ಕೆ ವೆಚ್ಚ ಮಾಡಲಾಗಿದೆ. ಹಾಗಾಗಿ ತೊಂದರೆ ಕಾಣಿಸಿಕೊಂಡಿದೆ ಎಂದರು.

ದೇಹಲಿ ವಿಧಾನಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು ಎಪಿಪಿ ನೀಡಿರುವ ಜನಪ್ರೀಯ ಯೋಜನೆಗಳು ಆ ಪಕ್ಷದ ಗೆಲುವಿಗೆ ಕಾರಣವಾಗಿದೆ. ದೇಶದ ವಿಷಯ ಬಂದಾಗ ದೇಶದ ಅಖಂಡತೆ, ರಾಷ್ಟಿçÃಯತೆ ವಿಷಯ ಬಂದಾಗ ಅದೇ ಜನ ಬಿಜೆಪಿ ಬೆಂಬಲಿಸಿದ್ದಾರೆ. ಪ್ರಾದೇಶಿಕ ಪಕ್ಷಗಳು ಜನಪ್ರೀಯ ಯೋಜನೆಗಳು ಘೋಷಣೆ ಮಾಡಿರುವ ಪರಿಣಾಮ ಅವುಗಳ ಅಧಿಕಾರಕ್ಕೆ ಬರಲು ಸಹಾಯವಾಗುತ್ತಿದೆ ಎಂದು ಹೇಳಿದರು.

ಆಕ್ರಮ ಮರಳು ಗಣಿಗಾರಿಕೆ ಯಾರು ಮಾಡುತ್ತಿದ್ದಾರೆ ಎನ್ನುವುದರ ಮೇಲೆ ನಿಗಾ ಇಡಲಾಗಿದೆ. ಜನತೆಗೆ ಮರಳು ಸುಲಭವಾಗಿ ಸಿಗುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಜತೆಗೆ ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT