ಸಚಿವ ಆನಂದ್ ಸಿಂಗ್ , ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವ ಮಾಡಿ 'ಕುರಿ ಕಾಯಲು ತೋಳವನ್ನು ಬಿಟ್ಟಂತೆ' ಆಗಿದೆ:ಸಿದ್ದರಾಮಯ್ಯ

ನೂತನ ಸಚಿವ ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿರುವುದಕ್ಕೆ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘನೆ ಸೇರಿದಂತೆ 15 ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವರನ್ನಾಗಿ ಮಾಡಿದ್ದು ಎಷ್ಟು ಸರಿ ಎಂದು ಕೇಳುತ್ತಿದ್ದಾರೆ.

ಬೆಂಗಳೂರು: ನೂತನ ಸಚಿವ ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿರುವುದಕ್ಕೆ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘನೆ ಸೇರಿದಂತೆ 15 ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವರನ್ನಾಗಿ ಮಾಡಿದ್ದು ಎಷ್ಟು ಸರಿ ಎಂದು ಕೇಳುತ್ತಿದ್ದಾರೆ.


ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕರಾಗಿರುವ ಆನಂದ್ ಸಿಂಗ್ ಗೆ ಇತ್ತೀಚೆಗೆ ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ ಆರಂಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿತ್ತು. ಆದರೆ ಕೇವಲ 24 ಗಂಟೆಗಳಲ್ಲಿಯೇ ಅವರ ಖಾತೆ ಬದಲಾವಣೆಯಾಗಿ ಅರಣ್ಯ ಖಾತೆ ನೀಡಲಾಗಿದೆ. 


ಅವರು ಇತ್ತೀಚೆಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಟಿನಲ್ಲಿ 15 ಕೇಸುಗಳು ಅವರ ವಿರುದ್ಧ ವಿಚಾರಣೆಗೆ ಬಾಕಿಯಿವೆ. ಮೀಸಲು ಅರಣ್ಯದಲ್ಲಿ ನಿಷೇಧಕಾರಿ ಚಟುವಟಿಕೆಗಳನ್ನು ನಡೆಸಿದ ಆರೋಪಗಳು ಅವರ ಮೇಲಿದೆ. ಹೀಗಿರುವಾಗ ಅರಣ್ಯ ಖಾತೆ ಅವರಿಗೆ ನೀಡಿದ್ದು ಅವರ ಮೇಲಿನ ಕೇಸುಗಳನ್ನು ಮುಚ್ಚಿ ಹಾಕಲೇ ಎಂಬ ಆರೋಪ ಕೇಳಿಬರುತ್ತಿದೆ.


ಈ ಬಗ್ಗೆ ನಿನ್ನೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಕಚೇರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕುರಿ ಕಾಯಲು ತೋಳವನ್ನು ಬಿಟ್ಟಂತೆ ಆಗಿದೆ. ಇದನ್ನು ಒಪ್ಪಲು ಖಂಡಿತಾ ಸಾಧ್ಯವಿಲ್ಲ ಎಂದರು. 15 ಕೇಸುಗಳು ಅವರ ಮೇಲಿರುವಾಗ ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿದ್ದು ಸರಿಯಲ್ಲ, ಅರಣ್ಯ ಕಾಯ್ದೆಯಡಿ ಗಂಭೀರ ಆರೋಪ ಎದುರಿಸುತ್ತಿರುವವರನ್ನು ಅದೇ ಖಾತೆಯ ಸಚಿವರನ್ನಾಗಿ ಹೇಗೆ ನೇಮಕ ಮಾಡಲಾಗುತ್ತದೆ ಎಂದು ಕೇಳಿದ್ದಾರೆ.ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಅವರನ್ನು ಈ ಕುರಿತು ಟೀಕಿಸಿದೆ.


ಜೆಡಿಎಸ್ ಕೂಡ ಸಿಎಂ ನಿರ್ಧಾರವನ್ನು ಖಂಡಿಸಿದೆ. ನೂತನ ಸಚಿವರು ಬಿಜೆಪಿಗೆ ಸೇರಿದ್ದು ಅಧಿಕಾರದಾಹ ಮತ್ತು ದುಡ್ಡು ಮಾಡಲು. ಇಂತವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ. ಅರಣ್ಯ ಕಾಯ್ದೆಯಡಿ ಆರೋಪ ಎದುರಿಸುತ್ತಿರುವವರು ಅರಣ್ಯ ಸಚಿವರೇ ಆಗುತ್ತಾರೆ ಎಂದರೆ ತಮ್ಮ ಮೇಲಿನ ಕೇಸನ್ನು ಮುಚ್ಚಿ ಹಾಕಲು ಅವರು ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತಡ ಹೇರಬಹುದಲ್ಲವೇ ಎಂದು ಜೆಡಿಎಸ್ ನಾಯಕ ರಮೇಶ್ ಬಾಬು ಕೇಳುತ್ತಾರೆ.


ಕಾರ್ಯಕರ್ತ ಹಾಗೂ ಅಡ್ವೊಕೇಟ್ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿ, ಆನಂದ್ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆ ಮತ್ತು ರಫ್ತು, ಅರಣ್ಯ ಉತ್ಪನ್ನಗಳನ್ನು ಅಕ್ರಮವಾಗಿ ಸಾಗಾಣೆ ಮಾಡಿರುವುದು ಸೇರಿದಂತೆ 15 ಕೇಸುಗಳು ವಿಚಾರಣೆ ಬಾಕಿ ಉಳಿದಿವೆ. ಕರ್ನಾಟಕ ಅರಣ್ಯ ಕಾಯ್ದೆಯಡಿ ಕೂಡ ಅವರ ವಿರುದ್ಧ ಕೇಸುಗಳಿವೆ ಎಂದಿದ್ದಾರೆ.


ಆದರೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಆನಂದ್ ಸಿಂಗ್ ಪರವಾಗಿ ಮಾತನಾಡಿದ್ದಾರೆ. ಅವರ ಮೇಲಿನ ಈ ಯಾವ ಆರೋಪಗಳು ಕೂಡ ಸಾಬೀತಾಗಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT