ಬಿ ಸಿ ಪಾಟೀಲ್ 
ರಾಜಕೀಯ

ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಗಿಂತ ಮಿಗಿಲಾದವರೇ?: ಬಿ.ಸಿ.ಪಾಟೀಲ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಚುನಾವಣೆಯಲ್ಲಿ ಜಯಗಳಿಸಿ ಸಚಿವರಾದವರ ಮೇಲೆ ಮತ್ತೆ ಮತ್ತೆ ತಮ್ಮ ಟೀಕೆ ಮಾಡುತ್ತಿರುವುದನ್ನು ಖಂಡಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಇವರೇನು ಸುಪ್ರೀಂ ಕೋರ್ಟ್ ಗಿಂತ ಮಿಗಿಲಾದವರೇ ಎಂದು ಪ್ರಶ್ನಿಸಿದ್ದಾರೆ. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಚುನಾವಣೆಯಲ್ಲಿ ಜಯಗಳಿಸಿ ಸಚಿವರಾದವರ ಮೇಲೆ ಮತ್ತೆ ಮತ್ತೆ ತಮ್ಮ ಟೀಕೆ ಮಾಡುತ್ತಿರುವುದನ್ನು ಖಂಡಿಸಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಇವರೇನು ಸುಪ್ರೀಂ ಕೋರ್ಟ್ ಗಿಂತ ಮಿಗಿಲಾದವರೇ ಎಂದು ಪ್ರಶ್ನಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಕೂಡ ಹಿಂದೆ ಜೆಡಿ ಎಸ್‍ನಿಂದ ಕಾಂಗ್ರೆಸಿಗೆ ಹೋದವರು. ಆಗ ಉಪ ಚುನಾವಣೆಯಲ್ಲಿ 200ಕ್ಕೂ ಹೆಚ್ಚು ಮತಗಳಿಂದ ಕೂದಲೆಳೆ ಅಂತರದಲ್ಲಿ ಜಯಗಳಿಸಿದವರು. ಅವರಿಂದ ನಾವು ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು. 

ನಾವೇನೂ ಕ್ರಾಸ್ ಓಟಿಂಗ್ ಮಾಡಿ ಕಾನೂನು ಉಲ್ಲಂಘಿಸಿಲ್ಲ. ರಾಜಿನಾಮೆ ನೀಡಿದ್ದೇವೆ. ಸುಪ್ರೀಮ್ ಕೋರ್ಟ್ ನೀಡಿದ ಆದೇಶ ಬಂದ ನಂತರ ಉಪ ಚುನಾವಣೆಯಲ್ಲಿಯೂ ಸ್ಪರ್ಧಿಸಿ ಜನಾದೇಶ ಪಡೆದಿದ್ದೇವೆ. ಹೀಗಿರುವಾಗ ಸಿದ್ದರಾಮಯ್ಯ ಅವರು ನಮ್ಮನ್ನು ಟೀಕಿಸುವುದರಲ್ಲಿ ಅರ್ಥವಿಲ್ಲ.‌ ಪದೇ ಪದೇ ತಾನು‌ ಕಾನೂನು ವಿದ್ಯಾರ್ಥಿ ಎಂದು ಹೇಳುವ ಅವರು ಕಾನೂನಿನ ಪ್ರಾಥಮಿಕ ಅಂಶಗಳನ್ನು ಮೊದಲು ಅರಿಯಲಿ. ಅವರು ಸುಪ್ರೀಂ ಕೋರ್ಟ್ ಗಿಂತ ದೊಡ್ಡವರಲ್ಲ ಎಂದು ಕುಟುಕಿದರು.

ನಾನಾಗಿಯೇ ಬಯಸಿ ಕೃಷಿ ಇಲಾಖೆ ಪಡೆದಿದ್ಸೇನೆ. ರೈತರ ಮಗನಾಗಿ ಅವರ ಕಷ್ಟಗಳು ಗೊತ್ತಿವೆ. ಅವುಗಳನ್ನು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದರು. 

ತಾವು ಹಸಿರು ಶಾಲು ಹೊದ್ದಿರುವ ಬಗ್ಗೆ ಪ್ರಸ್ತಾಪಿಸಿದ ಅವರು ಇದು ಕೃಷಿ ಸಚಿವನಾಗಿ ನನ್ನ ಸಮವಸ್ತ್ರ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಕಾವೇರಿ ನೀರಿನ ವಿವಾದ: ಕರ್ನಾಟಕದಿಂದ 9,000 ಕ್ಯೂಸೆಕ್ ನೀರು ಬಿಡುಗಡೆಯಾದರೂ, ಕೊರತೆ ಇದೆ-ತಮಿಳುನಾಡು; ಸೆ.15 ಕ್ಕೆ ಮತ್ತೆ ವಿಚಾರಣೆ

ನೇಪಾಳದಲ್ಲಿ ಹಠಾತ್ ಪ್ರವಾಹ: ಕರ್ನಾಟಕದ 13 ಮಂದಿ ನಾಪತ್ತೆ; ಇನ್ನೂ ಸುಳಿವು ಸಿಕ್ಕಿಲ್ಲ ಎಂದ ಸಿಎಂ ಡಿಕೆ ಶಿವಕುಮಾರ್

7,200 ಮೀಟರ್‌ ಎತ್ತರದಿಂದ ಕುಸಿತ; ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮನದಿ ಕುಸಿತದ ಭೀಕರ ಕ್ಷಣ ಡ್ರೋನ್ ಕ್ಯಾಮೆರಾದಲ್ಲಿ ಸೆರೆ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!