ಮಹೇಶ್ ಕುಮಟಳ್ಳಿ 
ರಾಜಕೀಯ

ಎಂಎಸ್ಐಎಲ್ ಬೇಡವೇ ಬೇಡ:  ಸೇನಾ ನಿಗಮ ಮಂಡಳಿಗೆ ಮಹೇಶ್ ಕುಮಟಹಳ್ಳಿ ಪಟ್ಟು!

ನಿರೀಕ್ಷಿತ  ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ  ಶಾಸಕ ಮಹೇಶ್ ಕುಮಟಹಳ್ಳಿ ಇದೀಗ 'ಭೂ ಸೇನಾ ನಿಗಮ ಮಂಡಳಿ' ಗೆ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರು: ನಿರೀಕ್ಷಿತ  ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ  ಶಾಸಕ ಮಹೇಶ್ ಕುಮಟಹಳ್ಳಿ ಇದೀಗ 'ಭೂ ಸೇನಾ ನಿಗಮ ಮಂಡಳಿ' ಗೆ ಬೇಡಿಕೆ ಇಟ್ಟಿದ್ದಾರೆ.

ಇಂಜಿನಿಯರಿಂಗ್ ಪದವೀಧರರಾಗಿರುವ ತಮಗೆ ಎಂ.ಎಸ್.ಐ.ಎಲ್ ಬೇಡ ಭೂಸೇನಾ ನಿಗಮವೇ ಬೇಕು  ಎಂದಿದ್ದಾರೆ.

ತಾವು ಕೇಳಿರುವ ನಿಗಮ ಮಂಡಳಿಯನ್ನು ನೀಡುವ ಸವಾಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದಿದೆ ಎಂದರು.
 
ಉಪಚುನಾವಣೆ  ಗೆದ್ದಿರುವ ಎಲ್ಲಾ ಮಾಜಿ ಅನರ್ಹರಿಗೆ ಸಚಿವ ಸ್ಥಾನ ನೀಡಲಾಗತ್ತದೆ ಎನ್ನಲಾಗಿತ್ತು. ಆದರೆ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ. 

ರಮೇಶ್ ಜಾರಕಿಹೊಳಿ ಅವರು  ಬಹು ಪ್ರಯತ್ನ ಪಟ್ಟರಾದರೂ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ  ನೀಡಲಾಗಿಲ್ಲ. ಯಡಿಯೂರಪ್ಪ ಸರ್ಕಾರ ರಚನೆಗೆ 'ತ್ಯಾಗ' ಮಾಡಿ ಉಪಚುನಾವಣೆ ಸ್ಪರ್ಧಿಸಿ ಗೆದ್ದಿರುವ ಮಹೇಶ್ ಕುಮಟಹಳ್ಳಿ, ಮುಂದಿನ ದಿನಗಳಲ್ಲಿ ನನ್ನ ಮಂತ್ರಿ ಮಾಡುವುದಾಗಿ  ಭರವಸೆ ಕೊಟ್ಟಿದ್ದಾರೆ. ಸದ್ಯ ತಾವು ಕೇಳಿರುವ ನಿಗಮ ಮಂಡಳಿ ಕೊಡುವ ಬಗ್ಗೆ ನಿರ್ಧಾರ  ಕೈಗೊಳ್ಳಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸಚಿವ ರಮೇಶ್ ಜಾರಕಿಹೊಳಿಗೆ ಬೆಳಗಾವಿ  ಜಿಲ್ಲೆಯ ಉಸ್ತುವಾರಿ ನೀಡಿದಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ಶಾಸಕ ಮಹೇಶ್  ಕುಮಟಹಳ್ಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT