ಸಂಗ್ರಹ ಚಿತ್ರ 
ರಾಜಕೀಯ

ಶಾಸಕಾಂಗ ಸಭೆಯಲ್ಲಿ ಭಾವನೆ ಹಂಚಿಕೊಳ್ಳಲು ಅವಕಾಶ ನೀಡಬೇಕು, ಇಲ್ಲದಿದ್ದರೆ ಸಮಾನ ಮನಸ್ಕರ ಸಭೆ: ಯತ್ನಾಳ

ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ವಿಜಯಪುರ: ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಶಾಸಕರಿಗೆ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ. ಎಷ್ಟು ಜನ ಶಾಸಕರು ಸೇರಿ ಚರ್ಚಿಸುತ್ತೇವೆ ಎಂದು ಈಗಲೇ ಹೇಳುವುದಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಿ ಅನುದಾನ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸುತ್ತೇವೆ. ಉತ್ತರ ಕರ್ನಾಟಕವೆಂದರೆ ಕೇವಲ ಹುಬ್ಬಳ್ಳಿ - ಧಾರವಾಡ ಅಲ್ಲ ಎಂದು ಅವರು ಪರೋಕ್ಷವಾಗಿ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ವೆಸ್ಟರ್ ಮೀಟ್ ಅನ್ನು ಹುಬ್ಬಳ್ಳಿ ಬದಲು ಉತ್ತರ ಕರ್ನಾಟಕದ ಬೇರೆ ಜಿಲ್ಲೆಯಲ್ಲಿ ಮಾಡಬಹುದಿತ್ತು. ಬರೀ ಹುಬ್ಬಳ್ಳಿ-ಧಾರವಾಡಕ್ಕೆ ಯೋಜನೆಗಳನ್ನು ತಂದರೆ ಹೇಗೆ?. ಕಲಬುರಗಿ, ವಿಜಯಪುರ, ಬಾಗಲಕೋಟೆಗೂ ಯೋಜನೆ ತರಬೇಕು. ಉತ್ತರ ಕರ್ನಾಟಕಕ್ಕೆ ಹಲವು ಕಚೇರಿಗಳ ಸ್ಥಳಾಂತರ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಶ್ನಿಸಲಾಗುವುದು ಎಂದು ಯತ್ನಾಳ ಹೇಳಿದರು.

ಮರಿಯಮ್ಮನಹಳ್ಳಿ ಅಪಘಾತ ಪ್ರಕರಣದಲ್ಲಿ ಸಚಿವ ಆರ್. ಅಶೋಕ ಅವರ ಪುತ್ರನ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೆಂಜ್ ಬದಲು ಆಡಿ ಕಾರು ಎಂದು ಎಫ್ ಐ ಆರ್ ನಲ್ಲಿ ನಮೂದು ಮಾಡಿರುವುದು ದೊಡ್ಡ ತಪ್ಪಲ್ಲ. ಪೊಲೀಸ್ ಸಿಬ್ಬಂದಿ ತಪ್ಪಾಗಿ ಬರೆದಿರಬಹುದು. ಒಂದು ತಪ್ಪು ಶಬ್ದವನ್ನು ಹಿಡಿದು ವಿವಾದ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಪಂಚಮಸಾಲಿ ಸಮಾಜಕ್ಕೆ ಸಚಿವ ಮತ್ತು ಮುಖ್ಯಮಂತ್ರಿ ಸ್ಥಾನ ಬೇಡಿಕೆಯ ಇರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೇ ಸಮಾಜದಿಂದ ಮತ ಕೇಳಿ ಆಯ್ಕೆಯಾಗಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೂಡಲ ಸಂಗಮ ಸ್ವಾಮೀಜಿಯವರು ಸಮಾಜದ ಪರ ಮಾತಾಡಿರಬಹುದು ಎಂದು ಸ್ಪಷ್ಟನೆ ನೀಡಿದರು. ಆನಂದ ಸಿಂಗ್  ಅವರಿಗೆ ಅರಣ್ಯ ಖಾತೆ ನೀಡಿದ್ದಕ್ಕೆ ಅಪಸ್ವರ ಎದ್ದಿರುವ ಬಗ್ಗೆ ಕೇಳಿದಾಗ, ನಾನು ಯಾವುದರ ಬಗ್ಗೆಯೂ ಪ್ರತಿಕ್ರಿಯೆ ನೀಡುವುದಿಲ್ಲ. ನಾನು ಪಕ್ಷದ ಹಿರಿಯ‌ ನಾಯಕನಾದರೂ ಪ್ರತಿಕ್ರಿಯೆ ನೀಡುವುದಿಲ್ಲ. ಹಿರಿಯ ನಾಯಕ ಆದರೆ ಎಲ್ಲದರ ಬಗ್ಗೆ ಉತ್ತರ ನೀಡಲು ಆಗುವುದಿಲ್ಲ. ಹಿರಿಯ ನಾಯಕರ ಬಹಳ ಜನ ಮೂಲೆಗುಂಪಾಗಿದ್ದಾರೆ ಎಂದು  ವಿಜಯಪುರ ನಗರ ಬಿಜೆಪಿ‌ ಶಾಸಕ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT