ರಮೇಶ್ ಜಾರಕಿಹೊಳಿ 
ರಾಜಕೀಯ

ಜಲ ವಿವಾದದಲ್ಲಿ ಕಾನೂನು ಹೋರಾಟಕ್ಕೆ ಆದ್ಯತೆ: ಸಚಿವ ರಮೇಶ್ ಜಾರಕಿಹೊಳಿ

ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವುದು ತಮ್ಮ ಗುರಿಯಾಗಿದ್ದು, ಸವೋಚ್ಚ ನ್ಯಾಯಾಲಯದಲ್ಲಿರುವ ನೀರು ಹಂಚಿಕೆ ಪ್ರಕರಣಗಳಲ್ಲಿ ಪರಿಣಾಮಕಾರಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರು: ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವುದು ತಮ್ಮ ಗುರಿಯಾಗಿದ್ದು, ಸವೋಚ್ಚ ನ್ಯಾಯಾಲಯದಲ್ಲಿರುವ ನೀರು ಹಂಚಿಕೆ ಪ್ರಕರಣಗಳಲ್ಲಿ ಪರಿಣಾಮಕಾರಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ವಿಧಾನಸೌಧದ ಮೂರನೇ ಮಹಡಿಯ 342 ಕೊಠಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನತೆ ಮತ್ತು ರಾಜ್ಯದ ಭೂಮಿಗೆ ನೀರುಣಿಸುವುದು. ಜನರ ಕಣ್ಣೀರ ಒರೆಸುವುದು ಎರಡೂ ನನ್ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಭಾವಿಸಿದ್ದೇನೆ. ಇದಕ್ಕಾಗಿ ಜನರ ಸಹಕಾರ ಅಗತ್ಯ ಎಂದರು.

ರಾಜ್ಯದ ಹಲವು ಜ್ವಲಂತ ನೀರಾವರಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರಾಜ್ಯದ ಕಾವೇರಿ, ಕೃಷ್ಣಾ, ಮಹದಾಯಿ ಸೇರಿದಂತೆ ಎಲ್ಲಾ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸಿ, ಜನತೆಗೆ ಅದರಲ್ಲೂ ವಿಶೇಷವಾಗಿ ರೈತರಿಗೆ ಅನುಕೂಲವಾಗುವಂತೆ ಕರ್ತವ್ಯ ನಿಭಾಯಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT