ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜಕೀಯ

ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಸಂವಿಧಾನ ಕುರಿತ ವಿಶೇಷ ಚರ್ಚೆಗೆ ಅವಕಾಶ- ಕಾಗೇರಿ

ರಾಜ್ಯ ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಭಾರತ ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ಎರಡು ದಿನಗಳ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಖರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಭಾರತ ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ಎರಡು ದಿನಗಳ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಖರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ

ಭಾರತ ಸಂವಿಧಾನ ಅಂಗೀಕಾರ ಮತ್ತು ಅನುಷ್ಠಾನಗೊಂಡು ಏಳು ದಶಕಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಎರಡು ದಿನಗಳ ರಾಜಕೀಯೇತರ ಈ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಸದನ ಕಲಾಪ ಸಲಹಾ ಸಮಿತಿಯಲ್ಲಿ ಕಾರ್ಯಕ್ರಮದ ರೂಪುರೇಷಗಳ ಬಗ್ಗೆ ಚರ್ಚಿಸಿ, ರಚನಾತ್ಮಕ ಚರ್ಚೆಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಅವರು ತಿಳಿಸಿದರು

ಫೆಬ್ರವರಿ 17 ರಂದು ರಾಜ್ಯಪಾಲ ವಜೂಭಾಯಿ ವಾಲ ಅವರು ಉಭಯ ಸಧನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಅದೇ ದಿನ ಅಪರಾಹ್ನ ಅಗಲಿದ ಚೇತನಗಳಿಗೆ ಶ್ರದ್ದಾಂಜಲಿ ಅರ್ಪಿಸಲಾಗುವುದು. ನಂತರ ರಾಜ್ಯಪಾಲರ ಭಾಷಣ ಕುರಿತು ಚರ್ಚೆ ಹಾಗೂ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಕಾರ್ಯಕ್ರಮಗಳು ಫೆಬ್ರವರಿ 20 ರ ವರೆಗೆ ನಡೆಯಲಿದೆ ಎಂದರು.  

ತದನಂತರ ಮಾರ್ಚ್ 2 ರಂದು  ಮರು ಸಮಾವೇಶಗೊಳ್ಳಲಿರುವ ಅಧಿವೇಶನದಲ್ಲಿ ಮಾರ್ಚ್ 5 ರಂದು ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-21 ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಕರ್ನಾಟಕ ಲೋಕಾಯುಕ್ತ ವಿಧೇಯಕವೂ ಒಳಗೊಂಡಂತೆ ಆರು ವಿಧೇಯಕಗಳು ಸದನದಲ್ಲಿ ಮಂಡಿಸಿ ಪರಿಶೀಲನೆಗೆ ಒಳಪಡಿಸಲು ಯೋಜಿಸಲಾಗಿದೆ. ಮಾರ್ಚ್ 31 ರ ವರೆಗೆ ಅಧಿವೇಶನ ನಡೆಯಲಿದೆ. ಇಪ್ಪತ್ತೈದು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಕುರಿತ ಚರ್ಚೆಗೆ ವಿಪುಲ ಅವಕಾಶ ದೊರೆಯಲಿದೆ ಎಂದರು.

ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯಲ್ಲಿಯೇ ಸದನ ನಡೆಯಬೇಕೆಂಬ ಹಿನ್ನೆಲೆಯಲ್ಲಿ ಖಾಸಗಿ ಮಾಧ್ಯಮಗಳ ಕ್ಯಾಮರಾಗಳಿಗೆ ಸದನದ ಅಂಗಳದಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಆದರೆ, ದೂರದರ್ಶನವು ಕಲಾಪವನ್ನು ಚಿತ್ರೀಕರಿಸಿ ಬ್ರಾಂಡ್‍ವಿಡ್ತ್ ಸಂಕೇತಗಳ ಮೂಲಕ ಖಾಸಗಿ ವಾಹಿನಿಗಳಿಗೆ ಕಲಾಪದ ಚಿತ್ರಣವನ್ನು ನೀಡಲಿದೆ ಎಂದು ಸಭಾಧ್ಯಕ್ಷರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT