ರಾಜಕೀಯ

ಬಿಜೆಪಿ ಸರ್ಕಾರ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ-ಎಚ್. ಡಿ. ದೇವೇಗೌಡ

Nagaraja AB

ಹುಬ್ಬಳ್ಳಿ: ಯಡಿಯೂರಪ್ಪ ಇನ್ನೂ ಮೂರು ವರ್ಷ ಅಧಿಕಾರ ನಡೆಸಲು ನಮ್ಮದು ಯಾವುದೇ ಅಭ್ಯಂತರ ಇಲ್ಲ. ಆದರೆ ಈ ಸರ್ಕಾರದ ಅಧಿಕಾರ ಬಂದ ಮೇಲೆ ರಾಜಕೀಯ ದ್ವೇಷ ಸಾಧಿಸಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎಚ್.ಡಿ.ಕುಮಾರಸ್ವಾಮಿ ಅವಧಿಯಲ್ಲಿ ಮಂಜೂರಾದ ಎಲ್ಲ ಕೆಲಸ,ಯೋಜನೆ ಗಳನ್ನು ಇಂದಿನ ಬಿಜೆಪಿ ಸರ್ಕಾರ ರದ್ದು ಮಾಡಿದೆ.ಯಡಿಯೂರಪ್ಪ ರಾಜಕೀಯ ದ್ವೇಷ ಸಾಧಿಸುವುದಿಲ್ಲ ಎಂದಿದ್ದರು.ಆದರೆ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಅಧಿಕಾರಿಗಳನ್ನು ಮಾರ್ಪಡು ಮಾಡಿದ್ದಾರೆ.ಕುಮಾರಸ್ವಾಮಿ ಮಂಜೂರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ತಡೆ ಹಿಡಿದಿದ್ದಾರೆ ಎಂದರು. 

 ಹಳೆ ರಾಜಕೀಯ ದ್ವೇಷದಿಂದ ನಮ್ಮ ಮೇಲೆ ಹಗೆತನ ಸಾಧಿಸಿದ್ರೆ ಸುಮ್ಮನೆ ಕೂರಲು ಆಗಲ್ಲ. ಸದನದ ಒಳಗೆ ಹಾಗು ಹೊರಗೆ ಹೋರಾಟ ಮಾಡುತ್ತೇವೆ. ಪೊಲೀಸರನ್ಮು ಬಳಿಸಿಕೊಂಡು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

SCROLL FOR NEXT