ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ರಾಜ್ಯಪಾಲರ ಭಾಷಣೆ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದು ತಂತ್ರ 
ರಾಜಕೀಯ

ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ರಾಜ್ಯಪಾಲರ ಭಾಷಣ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದು ತಂತ್ರ

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ವಿಧಾನಸೌಧದಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದರಾಮಯ್ಯ ಅವರು ತಂತ್ರ ರೂಪಿಸಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ವಿಧಾನಸೌಧದಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಹಿಡಿದು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ದರಾಮಯ್ಯ ಅವರು ತಂತ್ರ ರೂಪಿಸಿದ್ದಾರೆಂದು ತಿಳಿದುಬಂದಿದೆ. 

ಸಭೆಯಲ್ಲಿ ವಜುಭಾಯಿ ವಾಲಾ ಅವರ ಭಾಷಣವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯಅವರು, ರಾಜ್ಯಪಾಲರ ಭಾಷಣದಲ್ಲಿ ಹೊಸತೇನು ಇರಲಿಲ್ಲ. ಬದಲಾಗಿ ನಮ್ಮ ಸರ್ಕಾರದ ಅವಧಿಯ ಕಾರ್ಯಕ್ರಮಗಳನ್ನು ಹಾಗೂ ಮೈತ್ರಿ ಸರ್ಕಾರದ ಅವಧಿಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ ಹೊರತು ಯಡಿಯೂರಪ್ಪ ಸರ್ಕಾರದ ಸಾಧನೆಗಳ ಪಟ್ಟಿ ಇರಲಿಲ್ಲ ಎಂದು ಹೇಳಿದ್ದಾರೆ. 

ಇದರಂದೆ ಇಂದು ನಡೆಯಲಿರುವ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತಾಗಿ ಚರ್ಚೆ ನಡೆಯಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧರಾಮಯ್ಯ ಮುಂದಾಗಿದ್ದಾರೆ. ಶಾಸಕಾಂಗ ಸಭೆಯಲ್ಲಿ ಈ ವಿಚಾರವಾಗಿ ಶಾಸಕರ ಜೊತೆಗೆ ಚರ್ಚೆ ನಡಸಿದ್ದ ಸಿದ್ದರಾಮಯ್ಯ ಆಡಳಿತಪಕ್ಷದ ವಿರುದ್ಧ ಸದನದೊಳಗೆ ಹೋರಾಟ ನಡೆಸಲು ತಂತ್ರ ರೂಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT