ಕೆ.ಜೆ ಜಾರ್ಜ್ 
ರಾಜಕೀಯ

'ಆವೇಶ ಭರಿತ ಹೇಳಿಕೆಗಳಿಂದಲೇ ಕೆ.ಜೆ.ಜಾರ್ಜ ಗೃಹ ಸಚಿವ ಹುದ್ದೆ ಕಳೆದುಕೊಂಡರು'

ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿ ದ್ದರಿಂದಲೇ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಐಎಎಸ್ ಅಧಿಕಾರಿ ಡಿ.ಕೆ. ರವಿ ಮತ್ತು ಡಿವೈಎಸ್‍ಪಿ ಎಂ.ಕೆ. ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡ ರೆಂದು ಗೃಹ ಸಚಿವ ಬಸವ ರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು: ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿ ದ್ದರಿಂದಲೇ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಐಎಎಸ್ ಅಧಿಕಾರಿ ಡಿ.ಕೆ. ರವಿ ಮತ್ತು ಡಿವೈಎಸ್‍ಪಿ ಎಂ.ಕೆ. ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡ ರೆಂದು ಗೃಹ ಸಚಿವ ಬಸವ ರಾಜ ಬೊಮ್ಮಾಯಿ ಹೇಳಿದರು.

ಮಂಗಳೂರು ಗಲಾಟೆ ಸಂಬಂಧ ನಿಯಮ 69ಅಡಿಯಲ್ಲಿ ನಿಲುವಳಿ ಸೂಚನೆ ಮೇಲೆ ಚೆರ್ಚೆ ನಡೆಯುತ್ತಿದ್ದ ವೇಳೆ ಸಚಿವ ಸುರೇಶ್‍ ಕುಮಾರ್ ಪೊಲೀಸರ ನೈತಿಕತೆ ಕುಗ್ಗಿಸುವ ಕೆಲ ಸ ಮಾಡಬೇಡಿ ಎಂದು ಸಲಹೆ ನೀಡಿದರು.

ಆಗ ಮಧ್ಯ ಪ್ರವೇಶಿಸಿದ ಕೆ.ಜೆ.ಜಾರ್ಜ್ ಅವರು, ಬಿಜೆಪಿ ಆಡಳಿತ ವಿದ್ದಾಗ ಒಂದು ರೀತಿ ವಿರೋಧ ಪಕ್ಷದಲ್ಲಿದ್ದಾಗ ಮತ್ತೊಂದು ರೀತಿಯ ನಿಲುವುಗಳನ್ನು ಅನುಸರಿಸುತ್ತದೆ. 

ಡಿ.ಕೆ.ರವಿ ಮತ್ತು ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಪೊಲೀಸರು ತನಿಖೆ ನಡೆಸಿ ನೀಡಿದ್ದ ವರದಿಯನ್ನು ಆಗ ವಿರೋಧ ಪಕ್ಷದಲ್ಲಿದ್ದ ಬಿಜೆಪಿ ಒಪ್ಪಿಕೊಂಡಿರಲಿಲ್ಲ. ಕೊನೆಗೆ ಸಿಬಿಐ ತನಿಖೆಯಲ್ಲೂ ಸಿಐಡಿ ತನಿಖೆಯಲ್ಲಿ ಹೇಳಿದ್ದ ಅಂಶಗಳೇ ಸಾಬೀತಾಗಿವೆ.
ವಿರೋಧ ಪಕ್ಷದಲ್ಲಿದ್ದಾಗ ಪೊಲೀಸರನ್ನು ಒಪ್ಪಿಕೊಳ್ಳದ ಬಿಜೆಪಿ, ಆಡಳಿತ ಪಕ್ಷದಲ್ಲಿದ್ದಾಗ ವಿಭಿನ್ನ ನಿಲುವು ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಅದಕ್ಕೆ ಸ್ಪಷ್ಟನೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ನಾವೀಗ ಸಿಐಡಿ ತನಿಖೆಯನ್ನು ಒಪ್ಪಿಕೊಂಡಿದ್ದೇವೆ ಎಂದು ಹೇಳುತ್ತಿದ್ದಂತೆ ಎದ್ದು ನಿಂತ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಒಪ್ಪಿಕೊಳ್ಳಲೇಬೇಕು ಬೇರೆ ಗತಿ ಇಲ್ಲ ಎಂದು ತಿರುಗೇಟು ನೀಡಿದರು.

ಆಗ ಬಿಜೆಪಿಯವರು ಗಲಾಟೆ ಮಾಡಿದ್ದರಿಂದ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕಾಯಿತು. ಈಗ ಮಂಗಳೂರು ಗಲಾಟೆ ಪ್ರಕರಣದ ಹೊಣೆ ಯಾರು ಹೊತ್ತಿಕೊಳ್ಳುತ್ತಾರೆ. ಅದರ ಹೊಣೆ ಹೊತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ದಿನೇಶ್‍ಗುಂಡೂರಾವ್ ಹೇಳಿದರು.

ಜಾರ್ಜ್ ಅವರು ತಾಳ್ಮೆಯಿಂದ ವರ್ತಿಸಬೇಕು. ಆವೇಶ ಭರಿತರಾಗಿ ಮಾತನಾಡಿದ್ದರಿಂದ ಅವರಿಗೆ ಪ್ರಕರಣಗಳು ಬೆನ್ನತ್ತಿದವು ಎಂದರು. ಮಂಗಳೂರಿನಲ್ಲಿ ಪೊಲೀಸರು ಬೇರೆಯವರ ಆದೇಶದ ಅನುಸಾರ ಕೆಲಸ ಮಾಡುತ್ತಾರೆ ಎಂದು ನಿರಾಧಾರವಾಗಿ ಮಾತನಾಡಬಾರದು ಎಂದು ಬೊಮ್ಮಾಯಿ ಸಲಹೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT