ಸದಾನಂದಗೌಡ 
ರಾಜಕೀಯ

ನೋಟುಗಳ ಅಮಾನ್ಯದಿಂದ ಭ್ರಷ್ಟಾಚಾರ ಇಳಿಮುಖ: ಡಿ.ವಿ.ಸದಾನಂದ ಗೌಡ

ನೋಟು ಅಮಾನ್ಯದ ಬಳಿಕ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು ಅರ್ಥವ್ಯವಸ್ಥೆಗೆ ಹೊಸ ಆಯಾಮ ದೊರೆತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು: ನೋಟು ಅಮಾನ್ಯದ ಬಳಿಕ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು ಅರ್ಥವ್ಯವಸ್ಥೆಗೆ ಹೊಸ ಆಯಾಮ ದೊರೆತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಭಾರತೀಯ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ  ಅವರು ಭಾರತದ ಅರ್ಥವ್ಯವಸ್ಥೆ ಇಂದು ಜಗತ್ತಿನಲ್ಲೇ ಐದನೇ ಸ್ಥಾನದಲ್ಲಿದೆ. 

ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ದೇಶದ ಆರ್ಥಿಕತೆ ಪುನಶ್ಚೇತನಗೊಳ್ಳುತ್ತಿದೆ. ಇತ್ತೀಚಿಗೆ ವಿಶ್ವ ಬ್ಯಾಂಕ್ ಬಿಡುಗಡೆಗೊಳಿಸಿರುವ ವರದಿ ಅನ್ವಯ ಭಾರತದ ಸರಳ ವಹಿವಾಟು ಸೂಚ್ಯಂಕ 147 ರಿಂದ 69ಕ್ಕೆ ಜಿಗಿದಿರುವುದು ಉತ್ತಮ ವಿಚಾರವಾಗಿದೆ ಎಂದು ಅವರು ಹೇಳಿದರು.

ದೇಶದಲ್ಲಿ ಎದುರಾಗಿರುವ ಬಿಕ್ಕಟ್ಟುಗಳಿಂದ ಜಿಡಿಪಿ ಕುಸಿತ ಕಂಡಿರಬಹುದು. ಆದರೆ, ಮುಂದಿನ ದಿನಗಳಲ್ಲಿ ಸುಧಾರಣೆಯಾಗಲಿದೆ. ಜಿಎಸ್‍ಟಿ ಜಾರಿ ಬಳಿಕ ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ತೆರಿಗೆ ಸಂಗ್ರಹಣೆ ಸುಧಾರಣೆಯಾಗುತ್ತಿದೆ. ನೋಟು ರದ್ದತಿ ಬಳಿಕ ದೇಶದಲ್ಲಿ ಕಪ್ಪು ಹಣ ನಿಯಂತ್ರಣಕ್ಕೆ ಬಂದು, ಭ್ರಷ್ಟಾಚಾರವೂ ಕಡಿಮೆಯಾಗಿದೆ’ ಎಂದು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!